News Karnataka Kannada
Thursday, May 02 2024
ಹಾಸನ

ಇಂಡಿಯಾ ಒಕ್ಕೂಟಕ್ಕೆ ಯಶಸ್ಸು ಕಷ್ಟ: ಮಾಜಿ ಪ್ರಧಾನಿ ದೇವೇಗೌಡ

It will be difficult for India to succeed: Former PM HD Deve Gowda
Photo Credit : News Kannada

ಹಾಸನ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸೆಣಸಲು ರೂಪುಗೊಂಡಿರುವ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾಕ್ಕೆ ಯಶಸ್ಸು ದೊರೆಯುವುದು ಕಷ್ಟ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಭಾನುವಾರ ಹಾಸನದಲ್ಲಿ ಮಾತನಾಡಿದ ಅವರು ಇಂಡಿಯಾ ಈಗಾಗಲೇ 3 ಸಮನ್ವಯ ಸಮಿತಿಗಳನ್ನು ರಚಿಸಿದ್ದು, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬಗ್ಗೆಯೂ ತೀರ್ಮಾನ ಮಾಡಿದ್ದಾರೆ. ಆದರೆ ಇದುವರೆಗೂ ಪ್ರಧಾನಿ ಅಭ್ಯರ್ಥಿ ತೀರ್ಮಾನ ಮಾಡಲು ಸಾಧ್ಯವಾಗಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಿ ಇಂಡಿಯಾ ನಿಲ್ಲುವುದು ಅಸಾಧ್ಯ ಎಂದು ಹೇಳಲಾರೆ. ಆದರೆ ಕಷ್ಟವಿದೆ ಎಂದರು.

ಬಿಜೆಪಿಯೊಂದಿಗೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಬಿಜೆಪಿಗೆ ಇದುವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಆ ಪಕ್ಷಕ್ಕೆ ರಾಜ್ಯಾಧ್ಯಕ್ಷ ಯಾರೆಂಬುದೇ ಗೊತ್ತಿಲ್ಲ. ಬಿಜೆಪಿಯಲ್ಲಿಯೇ ಈಗ ಒಗ್ಗಟ್ಟಿಲ್ಲದ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಜೆಡಿಎಸ್‌ ನೊಂದಿಗೆ ಹೇಗೆ ಹೊಂದಾಣಿಕೆ ಸಾಧ್ಯ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು