News Karnataka Kannada
Wednesday, May 01 2024
ಹಾಸನ

ವೈಯಕ್ತಿಕ ಗಲಾಟೆಗೆ ರಾಜಕೀಯ ಬಣ್ಣ: ಜೆಡಿಎಸ್ ಮುಖಂಡರ ಆರೋಪ

Jd(S) leaders allege political colour to personal feud
Photo Credit : News Kannada

ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಸಮೀಪದ ಹಸುಗವಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಗಲಾಟೆ ಪ್ರಕರಣ ರಾಜಕೀಯ ತಿರುವು ಪಡೆದಿದ್ದು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ಪಕ್ಷದ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಹಸುಗವಳ್ಳಿ ಗ್ರಾಮದ ಗುರು ಎಂಬಾತನ ಮೇಲೆ ಅದೇ ಗ್ರಾಮದ ರಮೇಶ್ ಎಂಬಾತ ಕ್ಷುಲಕ ಕಾರಣಕ್ಕೆ ಗುರು ಕೈಯನ್ನು ಕಡಿದಿದ್ದು ಗುರು ಸದ್ಯ ಹಾಸನದ ಖಾಸಗಿ ಆಸ್ಪತ್ರೆಯೊಂದರ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಜೆಡಿಎಸ್ ಮುಖಂಡ ಮಾಜಿ ಗ್ರಾ.ಪಂ ಅಧ್ಯಕ್ಷ ಪಾಲಾಕ್ಷ ಮಾತನಾಡಿ ಈ ಗಲಾಟೆಯಲ್ಲಿ ರಾಜಕೀಯ ವೈಷಮ್ಯವಿಲ್ಲ ಅವರಿಬ್ಬರ ವೈಯುಕ್ತಿಕ ವಿಚಾರಗಳಿಗೆ ಗಲಾಟೆ ನಡೆದಿದೆ. ಗಲಾಟೆ ನಡೆದು ಮೂರು ದಿನದ ನಂತರ ಪ್ರಕರಣ ಹೊರ ಬಂದಿದ್ದು,ಒಂದು ವೇಳೆ ರಮೇಶ್ ತಪ್ಪು ಮಾಡಿದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಆದರೆ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಪಕ್ಷದ ಮೇಲೆ ಗೂಬೆಕೂರಿಸುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಶಾಂತಿಯುತವಾಗಿ ರಾಜಕೀಯ ಮಾಡಿಕೊಂಡು ಬಂದಿದೆ. ತಾಲೂಕಿನಲ್ಲಿ ಇದುವರೆಗೂ ಯಾವುದೇ ಘರ್ಷಣೆ ಅವಕಾಶ ಮಾಡಿಕೊಟ್ಟಿಲ್ಲ.ಸೌಜನ್ಯಯುತವಾಗಿ ನಡೆದುಕೊಂಡಿರುವಂತಹ ಜೆಡಿಎಸ್ ಪಕ್ಷಕ್ಕೆ ಕೆಟ್ಟ ಹೆಸರು ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಯುವ ಜೆಡಿಎಸ್ ಮುಖಂಡ ಉದೀಶ್ ಅಸಮಾಧಾನ ಹೊರಹಾಕಿದ್ದಾರೆ.

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಎಂ ಸ್ವಾಮಿ ವಾಸ್ತವ ನ್ಯೂಸ್ ನೊಂದಿಗೆ ಮಾತನಾಡಿ, ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಕಟ್ಟಿರುವುದು ಹಾಸ್ಯಾಸ್ಪದವಾಗಿದೆ. ವಾಸ್ತವ ವಿಚಾರ ಬೇರೆ ಇದೆ. ಇದು ಗ್ರಾಮಸ್ಥರಿಗೂ ತಿಳಿದಿದೆ ಆದರೆ ಕೆಲವರು ಜೆಡಿಎಸ್ ಪಕ್ಷಕ್ಕೆ ಕೆಟ್ಟ ಹೆಸರು ತರುವುದಕ್ಕೆ ರಾಜಕೀಯ ಬಣ್ಣ ಹಚ್ಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು