ಹೊಳೆನರಸೀಪುರ: ಕ್ಷೇತ್ರದ ಜನತೆ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ಜೆಡಿಎ ಸ್ನ ಅಕ್ರಮಗಳನ್ನು ಬಯಲಿಗೆಳೆಯುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಹೇಳಿದರು.
ಅವರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯ ಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿ ಶಾಸಕ ಎಚ್.ಡಿ.ರೇವಣ್ಣನವರು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರ ಸ್ವಯಂ ಅಭಿವೃದ್ಧಿಗೆ ಸಾಕಷ್ಟು ಸರಕಾರಿ ಕಾಮಗಾರಿಗಳನ್ನು ಮಾರ್ಪಾಟುಗೊಳಿಸಿಕೊಂಡಿದ್ದಾರೆ.
ಅವರ ಕುಟುಂಬದ ಒಡೆತನದ ಕಲ್ಯಾಣ ಮಂದಿರ, ಚಿತ್ರಮಂದಿರಗಳನ್ನು ಉಳಿಸಿಕೊಳ್ಳಲು ರೈಲ್ವೆ ಮೇಲ್ಸೇತುವೆ ದಿಕ್ಕನ್ನೇ ಬದಲಿಸಿದ್ದಾರೆ. ಇದರಿಂದ ಅವರ ವಾಣಿಜ್ಯ ಕಟ್ಟಡಗಳಿಗೆ ಪಾರ್ಕಿಂಗ್ ಸ್ಥಳಾವಕಾಶವಾಗಿದೆ. ಅವರು ನೀರಾವರಿ ಮತ್ತು ಏತನೀರಾವರಿ ಅನುಕೂಲತೆ ಮಾಡಿರುವ ಕಡೆಗಳಲ್ಲಿ ಅವರ ಒಡೆತನದ ಕೃಷಿ ಭೂಮಿ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದನ್ನು ಅಭಿವೃದ್ಧಿ ಎಂದು ನಂಬಬೇಕೇ ? ಎಂದು ಪ್ರಶ್ನಿಸಿದ್ದಾರೆ.
ಜೆಡಿಎಸ್ನ ಯಾವುದೇ ಬೆದರಿಕೆಗೆ ಹೆದರದೆ ಮುಕ್ತವಾಗಿ ಮತದಾನದಲ್ಲಿ ತೊಡಗಬೇಕು . ಬಹುತೇಕ ಸರಕಾರಿ ನೌಕರರು ಅವರಿಗೆ ಬೆದರಿ ಅವರ ಮಾತನ್ನು ಕೇಳುತ್ತಿದ್ದಾರೆ. ಪೊಲೀಸರು ಪ್ರಕರಣಗಳ ಪೂರ್ವಾಪರ ಅರಿಯದೇ ಏಕಪಕ್ಷೀಯವಾಗಿ ಕೇಸು ದಾಖಲಿಸದಂತೆ ರಾಜ್ಯ ಹಂತದಿಂದ ಸೂಚನೆ ಕೊಡಿಸಲಾಗಿದೆ. ಸದ್ಯದಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಚುನಾವಣಾ ಸಂದರ್ಭ ದೋಷಪೂರಿತ ವಿವರ ಒದಗಿಸಿದ ಮತ್ತು ರೇವಣ್ಣ ಒಬ್ಬ ಜನಪ್ರತಿನಿಧಿಯಾಗಿ ಚುನಾವಣಾ ಅಕ್ರಮ ನಡೆಸಿದ ಬಗ್ಗೆ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥ ಹಂತದಲ್ಲಿದೆ. ಮುಂದಿನ ೭ ದಿನಗಳೊಳಗೆ ತೀರ್ಪು ಹೊರಬೀಳುವ ಸಂಭವ ಇದೆ ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರೇಣು ಕುಮಾರ್, ತಾಲೂಕು ಮಂಡಳದ ಮಾಜಿ ಅದ್ಯಕ್ಷರುಗಳಾದ ಎಂ.ಎನ್.ರಾಜು, ಮಳಲಿ ನಾರಾಯಣಗೌಡ, ಶಾಂತಿಗ್ರಾಮ ಮಂಡಲದ ಅಧ್ಯಕ್ಷ ಶ್ರೀಹರಿ ಹಾಗೂ ತಾಲೂಕು ಕಾರ್ಯದರ್ಶಿ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…
ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…
ತಾಜ್ಮಹಲ್ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಎಚ್ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್ ಅಧ್ಯಕ್ಷ…
ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…