News Karnataka Kannada
Sunday, May 05 2024
ಹಾಸನ

ಫಲಾಪೇಕ್ಷೆ ಇಲ್ಲದೆ ಬಿಜೆಪಿ ಸೇರ್ಪಡೆ: ಎ.ಟಿ. ರಾಮಸ್ವಾಮಿ

Joining BJP without any expectations: A.T. Ramaswamy
Photo Credit : News Kannada

ಹಾಸನ : ಸ್ವಾರ್ಥ ರಾಜಕೀಯ, ಅಧಿಕಾರಕ್ಕಾಗಿ ಬಿಜೆಪಿ ಸೇರ್ಪಡೆ ಗೊಂಡಿಲ್ಲ ಎಂದು ಶಾಸಕ ಎ.ಟಿ. ರಾಮಸ್ವಾಮಿ ಸ್ಪಷ್ಟಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿದ್ದು ಸ್ವಾರ್ಥ ರಾಜಕೀಯಕ್ಕಾಗಿ ಅಥವಾ ಮುಂದೆ ಯಾವುದೇ ಅಧಿಕಾ ರಕ್ಕಾಗಿ ಬಿಜೆಪಿ ಸೇರ್ಪಡೆಕ್ಕೊಳ್ಳದೆ, ಕೇವಲ ಜನರ ಸೇವೆ ಮಾಡಲು ಉತ್ತಮ ವೇದಿಕೆಗಾಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಮೋದಿ ಅವರು ಉತ್ತಮ ಆಡಳಿತ ನೀಡುತ್ತಿದ್ದು ಭಾರತ ದೇಶವನ್ನು ಮಾದರಿ ರಾಷ್ಟ್ರವಾಗಿ ಮಾಡಿದ್ದಾರೆ. ಇಂದು ವಿಶ್ವ ನಾಯಕರಾಗಿ ರೂಪುಗೊಂಡಿದ್ದು ಅವರ ಉತ್ತಮ ಆಡಳಿತವನ್ನು ನೋಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ.
ಯಾವುದೇ ಫಲಪೇಕ್ಷೆ ಇಲ್ಲದೆ ಸೇವೆ ಮಾಡಲು ಸೇರ್ಪಡೆಗೊಂ ಡಿದ್ದು ಈ ಬಗ್ಗೆ ಬಿಜೆಪಿ ರಾಷ್ಟ್ರ ನಾಯಕರೊಂದಿಗೆ ರಾಜ್ಯ ನಾಯಕ ರೊಂದಿಗೆ ಚರ್ಚಿಸಿರುವುದಾಗಿ ರಾಮಸ್ವಾಮಿ ಸ್ಪಷ್ಟಪಡಿಸಿದರು.

ಮುಂದೆ ಪಕ್ಷ ಬಲವರ್ಧನೆಗೆ ಹಾಗೂ ಪಕ್ಷ ಹೇಳಿದಂತೆ ಮುನ್ನಡೆಯುವುದಾಗಿ ಹೇಳಿದ ರಾಮಸ್ವಾಮಿ ಪಕ್ಷ ಸೇರ್ಪಡೆ ಸಂಬಂಧ ಯಾವುದೇ ಷರತ್ತನ್ನು ಹಾಕಿಲ್ಲ ಎಂದು ಹೇಳಿದರು.

ರಾಹುಲ್ ಅನರ್ಹತೆ: ಪ್ರತಿಭಟಿಸೊ ನೈತಿಕತೆ ಇಲ್ಲ
ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅನರ್ಹತೆ ಕುರಿತು ಮಾತನಾಡುತ್ತಿದ್ದಾರೆ. ಸತ್ಯಮೇವ ಜಯತೆ ಎಂದು ಹೋರಾಟವನ್ನು ನಡೆಸುತ್ತಿದ್ದು ಈ ಹಿಂದೆ ಸ್ವತಃ ರಾಹುಲ್ ಗಾಂಧಿ ಅವರೇ ವಿರೋಧಿಸಿ ವಿಧೇಯಕವನ್ನು ಹರಿದು ಹಾಕಿದ್ದರು. ಇಂದು ಅವರೇ ಆ ಒಂದು ನಿಯಮದಡಿ ಅನರ್ಹರಾಗಿದ್ದಾರೆ. ಕಾಂಗ್ರೆಸ್ ಈ ಕುರಿತು ಹೋರಾಟ ಮಾಡು ತ್ತಿರುವುದು ಸರಿಯಲ್ಲ ಎಂದರು.

ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡುವಂತೆ ಹೋರಾಟ ಮಾಡುತ್ತಿದ್ದ ಕೆಲ ಪಕ್ಷದ ನಾಯಕರು ಇಂದು ಸುಮ್ಮನಾಗಿದ್ದಾರೆ ಎಂದು ಟೀಕಿಸಿದ ರಾಮಸ್ವಾಮಿ ಜನರಿಗೆ ಒಳಿತು ಮಾಡುವ ಮನೋಭಾವ ಇಲ್ಲದ ಕಾರಣ ಸುಮ್ಮನಿದ್ದಾರೆ ಎಂದು ಟೀಕಿಸಿದರು.

ಮುಸ್ಲಿಮರಿಗೆ ಅನ್ಯಾಯವಾಗಿಲ್ಲ:
ಮುಸ್ಲಿಮರಿಗೆ ಒಳ ಮೀಸಲಾತಿ ಕಡಿತದಿಂದ ಯಾವುದೇ ಅನ್ಯಾಯ ವಾಗಿಲ್ಲ ಆರ್ಥಿಕವಾಗಿ ಹಿಂದುಳಿದ ಸಮುದಾಯದವರಿಗೆ ೧೦% ಮೀಸ ಲಾತಿಯನ್ನು ನೀಡಿದ್ದು ಇದರಿಂದ ಮುಸ್ಲಿಮರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ರೈತರ ಬಗ್ಗೆ ಕಾಳಜಿ: ಪ್ರಚಾರಕ್ಕಷ್ಟೆ
ಜೆಡಿಎಸ್ ನವರು ದೇವರಲ್ಲಿ ಪ್ರಾರ್ಥನೆ ಮಾಡುವಾಗ ರೈತರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿರುವುದಾಗಿ ಪ್ರಚಾರ ಗಿಟ್ಟಿಸುತ್ತಾರೆ ಆದರೆ ಜಿಲ್ಲೆಯಲ್ಲಿನ ಬಗರ್ ಹುಕುಂ ಮಂಜೂರಾತಿ ಮಾಡುವ ಸಂದ ರ್ಭದಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡುವ ಮೂಲಕ ಮುಂಜೂರಾತಿ ಆಗದಂತೆ ತಡೆದಿರುವ ಹಲವು ಉದಾಹರಣೆಗಳು ಇದೆ. ಇವರು ರೈತರ ಹಿತಕಾಯುವರೆ ಎಂದು ಕಿಡಿಕಾರಿದರು.

ಎಚ್ ಡಿ ಸಿ ಸಿ ಬ್ಯಾಂಕ್ ನಲ್ಲಿ ಆಗುತ್ತಿರುವ ಆವ್ಯವಹಾರದ ಕುರಿತು ಮಾತನಾಡಬೇಡ ಎಂದು ಜೆಡಿಎಸ್ ನ ನಾಯಕರು ನನಗೆ ತಾಕೀತು ಮಾಡಿದರು ಇದರ ವಿರುದ್ಧ ಮಾತನಾಡಿದ್ದಕ್ಕೆ ಹಾಗೂ ನಡೆಯುತ್ತಿರುವ ಅವ್ಯವಹಾರ ತಪ್ಪು ಎಂದು ಹೇಳಿದ್ದಕ್ಕೆ ನನಗೆ ಇಂದು ಈ ಸ್ಥಿತಿ ಎಂದರು.

೨೦೦೮ ರಿಂದಲೂ ಆಹ್ವಾನ ಇತ್ತು
೨೦೦೮ ರಿಂದಲೂ ಸಹ ಬಿಜೆಪಿ ಸೇರ್ಪಡೆ ಕುರಿತು ಚರ್ಚೆಗಳು ನಡೆದಿದ್ದು ಬಿಜೆಪಿ ಮುಖಂಡರು ನನ್ನನ್ನು ಆಹ್ವಾನಿಸಿದ್ದರು, ಬಿ.ಎಸ್ ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ಸಹ ನಿಮ್ಮಂಥ ನಿಷ್ಠಾವಂತ ರಾಜಕೀಯ ವ್ಯಕ್ತಿ ಪಕ್ಷಕ್ಕೆ ಬೇಕಾಗಿದ್ದು ಉನ್ನತ ಹುದ್ದೆಯನ್ನು ನೀಡುವುದಾಗಿ ಆಹ್ವಾನ ನೀಡಿದ್ದರು ನಾನು ಓಡಿ ಹೋಗಲಿಲ್ಲ, ಪಕ್ಷಾಂತರ ಮಾಡುವ ಇಚ್ಛೆ ಆ ಸಂದರ್ಭದಲ್ಲಿ ನನಗೆ ಇರಲಿಲ್ಲ ಆದ್ದರಿಂದ ಇಂದು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ ಸೇರ್ಪಡೆಗೊಂಡಿದ್ದೇನೆ ಎಂದರು.

ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ ಕೇಂದ್ರ ನಾಯಕರಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಧಿಕೃತವಾಗಿ ಸೇರ್ಪಡೆ ಆದೆನು ಇದಕ್ಕೆ ಅನ್ಯತಾ ಭಾವಿಸಬಾರದು ಎಂದು ಸ್ಥಳೀಯ ಕಾಯಕರ್ತರಿಗೆ ಹಾಗೂ ಬಿಜೆಪಿ ನಾಯಕರಿಗೆ ಹೇಳಿದರು

ಜೆಡಿಎಸ್ : ಕುಟುಂಬದ ಆಸ್ತಿಯಾಗಿಸಿದ್ದಾರೆ
ಜೆಡಿಎಸ್ ಪಕ್ಷವನ್ನು ಕುಟುಂಬದ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಆದ್ದರಿಂದಲೇ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ಮುಂದುವರೆದಿದೆ. ಒಂದು ಕುಟುಂಬದ ಸಮಸ್ಯೆಯನ್ನು ಬಗೆಹರಿಸದ ಇವರು ಜನರ ಸಮಸ್ಯೆಯನ್ನು ಹೇಗೆ ಆಲಿಸಲಿದ್ದಾರೆ ಎಂದು ಲೇವಡಿ ಮಾಡಿದರು.

ಯಾವುದೇ ಪಲಾಪೇಕ್ಷೆ ಇಲ್ಲದೆ ಕಾರ್ಯನಿರ್ವ ಹಿಸುತ್ತಿದ್ದ ನನಗೆ ದ್ರೋಹ ಮಾಡಿದರು, ನನ್ನ ವಿರುದ್ಧ ಪ್ರತಿಭಟನೆ ಮಾಡುವಂತೆ ಕುಮ್ಮಕ್ಕು ನೀಡಿದರು ಮೋಸಗಾರ ಎಂದು ಕೂಗಿಸಿದರು , ಇಷ್ಟೆಲ್ಲಾ ಆದ ನಂತರ ಜೆಡಿಎಸ್‌ಗೆ ರಾಜೀನಾಮೆಗೆ ಮನಸ್ಸು ಮಾಡಿದೆ ಎಂದರು. ವಿಧಾನಸಭೆ ಚುನಾವಣೆ ಪಾರದರ್ಶಕವಾಗಿ ನಡೆಯಬೇಕು ಹಣದ ಬಲದಿಂದ ಸರ್ಕಾರವನ್ನು ಕಟ್ಟಬಾರದು, ಗುಣದ ಬಲದಿಂದ ಕಟ್ಟಬೇಕು ಯೋಗ್ಯರು ಬಡವರು ಸ್ಪರ್ಧಿಸಿ ಸರ್ಕಾರ ರಚನೆಯಾದರೆ, ಉತ್ತಮ ಆಡಳಿತ ನೀಡಲು ಸಾಧ್ಯವಿದೆ ಎಂದು ಎ.ಟಿ ರಾಮಸ್ವಾಮಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು