News Karnataka Kannada
Sunday, April 28 2024
ಹಾಸನ

ಕೊಣನೂರು: ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು – ಶಾಸಕ ಎ.ಮಂಜು

Development will be given top priority: MLA A Manju
Photo Credit : News Kannada

ಕೊಣನೂರು: ಅರಕಲಗೂಡು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹೆಚ್ಚಿನ ಆ‌ದ್ಯತೆ  ನೀಡಲಾಗುವುದು ಎಂದು ಶಾಸಕ ಎ.ಮಂಜು ಹೇಳಿದರು.

ರಾಮನಾಥಪುರ ಹೋಬಳಿಯ ಬೆಟ್ಟಸೋಗೆ ಗ್ರಾಮದ ಶ್ರೀ ಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಅಭಿವೃದ್ಧಿ ವಿಷಯದಲ್ಲಿ ರಾಜಕೀಯವನ್ನು ಹಿಂದೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಕೆಲ ಹಳ್ಳಿಗಳಿಗೆ ಭೇಟಿ ನೀಡಿದ್ದಾಗ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದಿದ್ದು ಅವುಗಳ ಬಗ್ಗೆ ಮೊದಲು ಗಮನಹರಿಸುತ್ತೇನೆ. ಅದೇ ರೀತಿ ಬಸವಾಪಟ್ಟಣ ರುದ್ರಪಟ್ಟಣ ಸಂಪರ್ಕಿಸುವ ಸೇತುವೆ ಕಾಮಗಾರಿ ಅರ್ಧಕ್ಕೇ ನಿಂತಿದ್ದು ಶೀಘ್ರವೇ ಅದನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಶ್ರಮಿಸುತ್ತೇನೆ. ಇದೇ ರೀತಿ ಸೇತುವೆಯನ್ನು ಕೊಣನೂರುಕಟ್ಟೇಪುರ ಸಂಪರ್ಕಿಸಲು ಈ ಬಾರಿ ಮಾಡಿಯೇ ಮಾಡುತ್ತೇನೆ ಎಂದು ತಿಳಿಸುತ್ತಾ ಶಾಸಕನಾಗಿ ಆಯ್ಕೆಯಾದ ಮೇಲೆ ಮೊದಲು ಈ ಗ್ರಾಮಕ್ಕೆ ಬಂದಿದ್ದೇನೆ.

ಈ ಗ್ರಾಮದ ಮೇಲೆ ಬಹಳ ಪ್ರೀತಿಯಿದ್ದು ಈ ಗ್ರಾಮಕ್ಕೆ ಏನೇ ಅಭಿವೃದ್ಧಿ ಬೇಕಾದರೂ ಮಾಡಿಕೊಡುತ್ತೇನೆ. ನಾನು ನನ್ನ ಮುಂದಿನ ಐದು ವರ್ಷದ ಅವಧಿಯಲ್ಲಿ ದ್ವೇಷದ ರಾಜಕಾರಣ ಮಾಡದೇ ಕ್ಷೇತ್ರದ ಎಲ್ಲಾ ಗ್ರಾಮಗಳನ್ನೂ ಒಂದೇ ತರನಾಗಿ ನೋಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳು, ದೇವಾಲಯ ಸಮಿತಿಯವರು, ಪಕ್ಷದ ಕಾರ್‍ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು