ನಂಜನಗೂಡು: ತಾಲೂಕಿನ ಚಿಕ್ಕ ಕವಲಂದೆ ಗ್ರಾಮಕ್ಕೆ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿದ್ದಾರೆ. ಮಳೆಯ ನಡುವೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಯನ್ನು ಆಲಿಸಿದರು.
ಅಂಬೇಡ್ಕರ್ ಭವನದ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ನಾನೇ ಗುದ್ದಲಿ ಪೂಜೆ ನೆರವೇರಿಸಿದ್ದೆ ಆದರೆ ಇನ್ನೂ ಕೂಡ ಭವನ ಪೂರ್ಣಗೊಂಡಿಲ್ಲ. ಇನ್ನು 5 ಲಕ್ಷ ಅನುದಾನವನ್ನು ನೀಡುತ್ತೇನೆ. ಸುಸಜ್ಜಿತವಾಗಿ ಭವನವನ್ನು ಕಟ್ಟಿಸಿಕೊಳ್ಳಿ ಎಂದು ಗ್ರಾಮಸ್ಥರಿಗೆ ತಿಳಿಸಿದರು.
ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದೆ ಆದಷ್ಟು ಬೇಗ ಪೂರ್ಣಗೊಳಿಸಿ ತಾವೇ ಉದ್ಘಾಟನೆ ಮಾಡುವಂತೆ ಗ್ರಾಮಸ್ಥರು ಸಂಸದರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಕುಂದುಕೊರತೆ ಸಮಸ್ಯೆಗಳ ಬಗ್ಗೆ ಸಂಸದರಿಗೆ ಅರ್ಜಿಗಳನ್ನು ಸಲ್ಲಿಸಿದರು ಆದಷ್ಟು ಬೇಗ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು. ಚಿಕ್ಕ ಕವಲಂದೆ ಗ್ರಾಮಸ್ಥರು ಮತ್ತು ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಿದ್ದರು.