News Karnataka Kannada
Sunday, May 05 2024
ಹಾಸನ

ಹಾಸನ: ಜನರ ಆಶೀರ್ವಾದ ಜೆಡಿಎಸ್ ಮೇಲಿದೆ- ರೇವಣ್ಣ

People's blessings are on JD(S),' says Revanna
Photo Credit : News Kannada

ಹಾಸನ: ಜನರ ಆಶೀರ್ವಾದ ದಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದ್ದು ಈ ಮೂಲಕ ಸ್ವರೂಪ್ ಅವರ ತಂದೆ ಆತ್ಮಕ್ಕೆ ಶಾಂತಿ ದೊರೆತಂತಾಗಿದೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ತಿಳಿಸಿದರು.

ನಗರದ ಜ್ಙಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳದ ನೂತನ ಶಾಸಕರಿಗೆ ಅಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹಾಗೂ ಎಸ್ ಸಿ ಎಸ್ ಟಿ ಸಮಾ ಜದವರು ಪಕ್ಷದ ಗೆಲುವಿಗೆ ಸಹ ಕಾರ ನೀಡಿದ್ದಾರೆ. ಅವರಿಗೆ ಅನ್ಯಾ ಯವಾಗದಂತೆ ನೋಡಿಕೊಳ್ಳಬೇ ಕಾದ ಜವಾಬ್ದಾರಿ ನಮ್ಮ ಮೇಲಿದ್ದು ಅವರ ಸಹಾಯ ಮರೆಯಬಾರದು ಎಂದು ಸ್ವರೂಪ ಪ್ರಕಾಶ್ ಅವರಿಗೆ ಸಲಹೆ ನೀಡಿದರು.

ಜೆಡಿಎಸ್ ಪಕ್ಷದ ನಾಯಕರ ನ್ನು ಹಾಸನ ಕ್ಷೇತ್ರದಲ್ಲಿ ೫೦,೦೦೦ ಮತಗಳಿಂದ ಸೋಲಿಸುವ ಬಗ್ಗೆ ಸವಾಲು ಹಾಕಿದ್ದರು ಆದರೆ ಕ್ಷೇತ್ರದ ಜನರು ಸಾವಿರಾರು ಮತಗಳ ಅಂತರದಿಂದ ಸ್ವರೂಪ್ ಅವರಿಗೆ ಗೆಲುವು ತಂದುಕೊಡುವಲ್ಲಿ ಸಹಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಾಸನ ನಗರವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರುವುದೇ ನನ್ನ ಗುರಿಯಾಗಿದ್ದು ಇದನ್ನು ಸಹಕಾರ ಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನವೂ ಪ್ರಯತ್ನ ನಡೆಯಲಿದೆ ಎಂದರು.

ಕಾಂಗ್ರೆಸ್ ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪಕ್ಷವನ್ನು ತುಳಿಯಲು ಪ್ರಯತ್ನಿಸು ತ್ತಿವೆ ಆದರೆ ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ೪ ಸ್ಥಾನವನ್ನು ಗೆದ್ದಿದ್ದು ನಮ್ಮ ಕಾರ್ಯ ಕರ್ತರ ನೋವಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕಿದೆ. ಸಕಲೇ ಶಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೂ ಕುಮಾರಸ್ವಾಮಿ ಅವರು ಸೋಲು ಕಂಡಿದ್ದಾರೆ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಉನ್ನತ ಹುದ್ದೆ ಕೊಡುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು .

ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ದೊರೆತಿದೆ. ಕ್ಷೇತ್ರದ ಎಲ್ಲಾ ಸಮುದಾಯದ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡು ವುದಾಗಿ ಭರವಸೆ ನೀಡಿದರು. ಮುಂದಿನ ಯಾವುದೇ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಸಂಘಟನೆ ಮಾಡುವ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಲಾಗುವುದು ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಮುಂದಿನ ಜಿಲ್ಲಾ ,ತಾಲೂಕು , ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸುವ ಸಲು ವಾಗಿ ಕೆಲಸ ಮಾಡೋಣ ಎಂದರು.

ಮಾಜಿ ಶಾಸಕ ಕೆ.ಎಂ ರಾಜೇಗೌಡ ಮಾತನಾಡಿ ಇಂದು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಂದರ್ಭ ಬಂದಿದ್ದು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಿದ ಎಲ್ಲರಿಗೂ ಪಕ್ಷದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ . ರಾಜ್ಯದಲ್ಲಿ ಈ ಬಾರಿಯ ಚುನಾವಣೆ ವಾರದರ್ಶಕವಾಗಿ ನಡೆಯದೆ ಅಕ್ರಮ ಭ್ರಷ್ಟಾಚಾರದಿಂದ ಕೂಡಿತ್ತು ಪ್ರಾದೇಶಿಕ ಪಕ್ಷ ಶಕ್ತಿ ಪ್ರದರ್ಶನ ಎಂಬಂತೆ ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಪಡೆಯುವಲ್ಲಿ ಇಲ್ಲಿನ ಮತದಾರರು ಸಹಕರಿಸಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ ಅವರು ಮಾತನಾಡಿ ಜಿಲ್ಲೆಯಲ್ಲಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಬಗ್ಗೆ ಇದ್ದ ಅತಿಯಾದ ಆತ್ಮ ವಿಶ್ವಾಸವೇ ಸೋಲಿಗೆ ಕಾರಣ ವಾಯಿತು. ಆಡಳಿತ ವಿರೋಧಿ ಅಲೆ ಬಿಜೆಪಿ ಗೆ ಮಾತ್ರ ಸೀಮಿತ ವಾಗದೆ ವಿರೋಧ ಪಕ್ಷದ ಶಾಸಕರ ಮೇಲು ಪ್ರಭಾವ ಬೀರಿದ್ದರಿಂದ ನಮಗೆ ಸೋಲುಂಟಾಯಿತು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡುವ ಮೂಲಕ ಜನರ ಮೇಲೆ ಆಮಿಷವೊಡ್ಡಿತು ಎಂದು ದೂರಿದರು. ಸಕಲೇಶಪುರದಲ್ಲಿ ಜೆಡಿಎಸ್ ಸೋಲು ಕಂಡಿದ್ದರು ಜಿಲ್ಲೆಯ ಲ್ಲಿ ನಾಲ್ಕು ಸ್ಥಾನ ಸೇರಿದಂತೆ ಸ್ವರೂಪ್, ರೇವಣ್ಣ ಅವರ ಗೆಲುವು ಪಡೆದಿದ್ದಾರೆ ಸೋಲಿನ ಕಾರಣವನ್ನು ಸರಿಪಡಿಸಿಕೊಂಡು ಮುನ್ನಡೆಯುವ ಮೂಲಕ ಮುಂದಿನ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸಿ ಜೆಡಿಎಸ್ ಪಕ್ಷ ಗೆಲುವು ನಿಟ್ಟಿನಲ್ಲಿ ಸಂಘಟಿತರಾಗೋಣ ಎಂದು ಕರೆ ನೀಡಿದರು.

ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಸ್ ದ್ಯಾವೇಗೌಡ , ಕಾರ್ಲೆ ಇಂದ್ರೇಶ್, ಕಮಲ್ ಕುಮಾರ್, ಗಿರೀಶ್ ಚನ್ನವೀರಪ್ಪ, ಇರ್ಷದ್ ಪಾಷಾ, ಬಿದರಿಕೆರೆ ಜಯರಾಮ್ , ರಘು ಹೊಂಗೆರೆ ಸೇರಿದಂತೆ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು