ಹಾಸನ: ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಆಗಮಿಸುವ ನಿರೀಕ್ಷೆಯಿದ್ದು ದಿನಾಂಕ ನಿಗದಿಯಾಗಿಲ್ಲ ಎಂದು ಪ್ರೀತಮ್ ಗೌಡ ಹೇಳಿದರು.
ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆ. ಆಗ ಯಾರು ಉತ್ತರ ಕೊಡಬೇಕು ಕೊಟ್ಟರೆ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ. ಐವತ್ತು ಸಾವಿರ ಮತಗಳ ಲೀಡ್ಗೆ ಈಗಲೂ ಬದ್ದ, ಮುಂದಿನ ಚುನಾವಣೆಗೂ ಅವಕಾಶ
ಕೊಡುತ್ತೇನೆ ಎಂದರು.
ರೇವಣ್ಣ ಅವರು ಜಿಲ್ಲೆಯಲ್ಲಿ ಅವರದ್ದೇ ಆದ ಶಕ್ತಿ ಇಟ್ಟುಕೊಂಡಿ ದ್ದಾರೆ. ಇಡೀ ರಾಜ್ಯ ದಲ್ಲಿ ಏಕೈಕ ಎಂಪಿ ಗೆಲ್ಲಿಸಿಕೊಂಡವರು ರೇವಣ್ಣ ಅವರು, ಎಂಪಿ, ಎಂಎಲ್ಸಿ ಚುನಾವಣೆಯಲ್ಲಿ ಇಬ್ಬರು ಮಕ್ಕಳನ್ನು ಗೆಲ್ಲಿಸಿಕೊಂಡಿ ದ್ದಾರೆ. ರೇವಣ್ಣ ಅವರು ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದಾರೆ. ರೇವಣ್ಣ ಹಿರಿಯ ನಾಯಕರು, ಅವರಿಗೆ ಗೌರವ ಕೊಡುತ್ತೇನೆ. ಸವಾಲೇ ಬೇರೆ ರೇವಣ್ಣ ಅವರ ಶಕ್ತಿನೇ ಬೇರೆ, ಯಾರೂ ಅಲ್ಲೆಗಳೆಯಬಾರದು ಎಂದು ಪರೋಕ್ಷವಾಗಿ ರೇವಣ್ಣ ಅವರದ್ದು ಕುಟುಂಬ ರಾಜಕಾರಣ ಎಂದು ಪ್ರೀತಂಗೌಡ ಕಾಲೆಳದರು.
೪-೫ ಸ್ಥಾನ ಬಿಜೆಪಿಗೆ: ಈ ಬಾರಿಯ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ನಾಲ್ಕರಿಂದ ಐದು ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ಬಿಜೆಪಿ ಮೊದಲನೇ ಸ್ಥಾನ ಗಳಿಸಲಿದ್ದು ಎರಡು ಮತ್ತು ಮೂರನೇ ಸ್ಥಾನವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಪಡೆಯಲಿದೆ ಎಂದು ಪ್ರೀತಂ ಜೆ ಗೌಡ ಭವಿಷ್ಯ ನುಡಿದರು .
ಚುನಾವಣೆಯಲ್ಲಿ ನನಗೆ ಜೆಡಿಎಸ್ ರಾಜಕೀಯ ವಿರೋಧಿಯಾಗಿದೆ ಯಾರೇ ಚುನಾವಣೆ ಕಣದಲ್ಲಿ ಬಂದರೂ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದ್ದು ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಸ್ವರೂಪ್ ಅವರಿಗೆ ಅವರದೇ ಆದ ರಾಜಕೀಯ ಶಕ್ತಿ ಇದ್ದು, ಈ ಹಿಂದೆ ಅವರ ತಂದೆ ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದರು.
ಏಪ್ರಿಲ್ 14 ರಂದು ನಾಮಪತ್ರ ಸಲ್ಲಿಸುತ್ತೇನೆ ಈ ಸಂಬಂಧ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪ್ರೀತಂಗ ತಿಳಿಸಿದರು.