Categories: ಹಾಸನ

ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಮರ ಕಡಗಣನೆ-ಪ್ರಜ್ವಲ್ ಖಂಡನೆ

ಬೇಲೂರು: ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ಕೇವಲ ಓಟು ಬ್ಯಾಂಕ್ ಮಾಡಿಕೊಂಡು ರಾಜಕೀಯ ನಡೆಸುತ್ತಾ ಬಂದಿದೆ. ಯಾವುದೇ ಮುಸ್ಲಿಂ ನಾಯಕರಿಗೆ ಪ್ರಮುಖ ಸ್ಥಾನ-ಮಾನ ನೀಡುವಲ್ಲಿ ಸಂಪೂರ್ಣ ವಿಫಲ ವಾದ ಹಿನ್ನಲೆಯಲ್ಲಿ ಬಹುತೇಕ ಮುಸ್ಲಿಮರು ಜೆಡಿಎಸ್ ಪಕ್ಷಕ್ಕೆ ಪೂರ್ಣ ಬೆಂಬಲ ನೀಡಿದ್ದಾರೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ರೇವಣ್ಣ ವಿಶ್ವಾಸವನ್ನು ವ್ಯಕ್ತ ಪಡಿಸಿದರು.

ಪಟ್ಟಣದ ಸಮೀಪದ ಬಂಟೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಲಿ ಶಾಸಕ ಕೆ.ಎಸ್.ಲಿಂಗೇಶ್ ಪರ ಚುನಾವಣೆ ಪ್ರಚಾರ ನಡೆಸಿದ ಬಳಿಕ ಕಾರ್ಯಕರ್ತರನ್ನು ಉದ್ದೇ ಶಿಸಿ ಮಾತನಾಡಿದ ಅವರು ಮುಸ್ಲಿಂ ಜನಾಂಗಕ್ಕೆ ಶೇ ೪ ರಷ್ಟು ಮೀಸಲಾತಿಯನ್ನು ದೇವೇಗೌಡರು ನೀಡಿದರೆ ಹೊರತು ಕಾಂಗ್ರೆಸ್ ಪಕ್ಷವಲ್ಲ, ಕಾಂಗ್ರೆಸ್ ಮುಸ್ಲಿಂರಿಗೆ ರಕ್ಷಣೆ ನೀಡದ ಸಂದರ್ಭದಲ್ಲಿ ಕುಮಾರಣ್ಣನವರು ರಕ್ಷಣೆ ನೀಡಿದ ಬಗ್ಗೆ ಇಂದಿಗೂ ಸಾಕ್ಷಿಯಾಗಿದೆ.

ಆದರೆ ಬಿಜೆಪಿ ಇಂತಹ ಮೀಸಲಾತಿಯನ್ನು ಕಿತ್ತು ಇನ್ನೊಂದು ವರ್ಗಕ್ಕೆ ಮೀಸಲಾತಿ ನೀಡುವ ಕ್ರಮವನ್ನು ಜೆಡಿಎಸ್ ಕಟುವಾಗಿ ಖಂಡಿಸಿದೆ. ಆದರೆ ಕಾಂಗ್ರೆಸ್ ಪಕ್ಷ ಜಾಣ ಮೌನಕ್ಕೆ ಜಾರಿದ್ದು ನಿಜಕ್ಕೂ ಶೋಚನೀಯವಾಗಿದೆ ಎಂದು ಕೈ ಪಕ್ಷದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಅವರು ಹಾಸನದಲ್ಲಿ ನಮ್ಮ ಸಣ್ಣ ತಪ್ಪಿನಿಂದ ಕಳೆದ ಭಾರಿ ಕ್ಷೇತ್ರ ಕೈಬಿಟ್ಟಿತ್ತು. ಆದರೆ ೨೦೨೩ ರಲ್ಲಿ ಜೆಡಿಎಸ್ ಭಾವುಟ ಹಾಸ ನದಲ್ಲಿ ಹಾರುವುದು ಶತಸಿದ್ದವಾಗಿದೆ. ಅಂತಯೇ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಸ್.ಲಿಂಗೇಶ್ ನಮ್ಮದೆ ಸರ್ಕಾರವಿಲ್ಲದ ಸಂದರ್ಭದಲ್ಲಿ ರೂ ೧೮೦೦ ಕೋಟಿ ಹಣವನ್ನು ಕ್ಷೇತ್ರಕ್ಕೆ ತರುವ ಮೂಲಕ ಬೇಲೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಗಮನ ನೀಡಿದ್ದಾರೆ.

ವಿಶೇಷವಾಗಿ ಇಂದು ಬೇಲೂರಿನಲ್ಲಿ ಮೊದಲ ಚುನಾ ವಣೆ ಪ್ರಚಾರವನ್ನು ನಾಗೇನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಕೈಗೊಂಡಿದ್ದು ಅತೀವ ಸಂತೋ ಷವಾಗಿದೆ ಲಿಂಗೇಶ್ ಗೆಲವು ಖಚಿತವೆಂದರು.

ಮಲೆನಾಡು ಭಾಗದ ಜೆಡಿಎಸ್ ಮುಖಂಡ ಎಂ.ಎ.ನಾಗ ರಾಜು ಮಾತನಾಡಿ. ಬೇಲೂರಿನಲ್ಲಿ ಈಗಾಗಲೇ ಕಾಂಗ್ರೆಸ್ ಹತ್ತು ವರ್ಷಗಳ ಕಾಲ ಆಳಿದೆ. ಆದರೆ ಅಭಿವೃದ್ಧಿ ಮಾತ್ರ ಜೆಡಿಎಸ್ ಪಕ್ಷದಿಂದ ಎಂಬ ಬಗ್ಗೆ ಇಲ್ಲಿನ ಜನತೆಗೆ ತಿಳಿದ ವಿಷಯವಾಗಿದೆ. ಜೆಡಿಎಸ್ ಪಕ್ಷ ಮಲೆನಾಡು ಪ್ರದೇಶವನ್ನು ನಿರ್ಲಕ್ಷ?ಯ ವಹಿಸಿದೆ ಎಂದು ವಿಪಕ್ಷಗಳ ದೂರಿದ್ದಾರೆ. ಮಲೆನಾಡು ಪ್ರದೇಶದಲ್ಲಿ ಜೆಡಿಎಸ್ ಪಕ್ಷ ಯಾವ ರೀತಿಯಲ್ಲಿ ಕೆಲಸ ಮಾಡಿದೆ ಎಂಬ ಖುದ್ದು ಭೇಟಿ ನೀಡಲಿ ಎಂದು ತೀರುಗೇಟು ನೀಡಿದರು.

ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಮಾತನಾಡಿ, ಕ್ಷೇತ್ರದ ಬಯಲುಸೀಮೆಗೆ ಈಗಾ ಗಲೇ ರಣಘಟ್ಟ, ಯಗಚಿ ಏತನೀರಾವರಿ ಮತ್ತು ಎತ್ತಿಹೊ ಳೆಯಿಂದ ನೀರಾವರಿ ಸೌಲಭ್ಯ ಒದಗಿಸಿದೆ. ಆದರೆ ಬಂಟೇ ನಹಳ್ಳಿ,ಹೆಬ್ಬಾಳು ಸೇರಿದಂತೆ ಆರು ಪಂಚಾಯಿತಿ ವ್ಯಾಪ್ತಿಗೆ ನೀರಾವರಿ ಸೌಲಭ್ಯ ಒದಗಿಸಲು ಹೆಬ್ಬಾಳು ಏತನೀರಾವರಿ ಕ್ರೀಯಾಯೋಜನೆ ನಡೆಸಿದ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಕಾರ್ಯದರ್ಶಿ ಸಿ.ಹೆಚ್. ಮಹೇಶ್, ಮುಖಂಡರಾದ ಬಾಣಸವಳ್ಳಿ ಆಶ್ವಥ್ ಕನಾಯಕನಹಳ್ಳಿ ಮಹಾದೇವ್, ಬಿ.ಎಂ.ರವಿಕುಮಾರ್. ನಾಗೇಶ್, ರಫಿಕ್, ಹಗರೆ ದಿಲೀಪ್,ಎಂ ಕೆಆರ್ ನಾಗೇಶ್, ಅಬ್ದುಲ್ ಸುಭಾನ್ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

Sneha Gowda

Recent Posts

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

10 mins ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

27 mins ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

45 mins ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

9 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

9 hours ago