Categories: ಹಾಸನ

ಹಾಸನದಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಪ್ರೀತಂ ಗೌಡ, ಪತ್ನಿ ಕಾವ್ಯಾ

ಹಾಸನ: ಬಿಜೆಪಿ ಶಾಸಕ, ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯಾ ಎಚ್.ಜಿ. ಅವರು ಕೂಡ ಹಾಸನ ವಿಧಾನಸಭೆ ಕ್ಷೇತ್ರದಲ್ಲಿಯೇ ನಾಮಪತ್ರ ಸಲ್ಲಿಸಿದ್ದಾರೆ. ತಾಲೂಕು ಕಚೇರಿಗೆ ಬೆಂಬಲಿಗರೊಂದಿಗೆ ತೆರಳಿದ ಅವರು ಬಿಜೆಪಿಯಿಂದಲೇ ನಾಮಪತ್ರ ಸಲ್ಲಿಸಿದ್ದಾರೆ.

ಈಗಾಗಲೇ ಪ್ರೀತಂ ಗೌಡ ಅವರು ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ್ದು, ಈಗ ಅವರ ಪತ್ನಿ ಕಾವ್ಯಾ ಎಚ್.ಜಿ ಅವರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಪ್ರೀತಂ ಗೌಡ ನಾಮಪತ್ರ ತಿರಸ್ಕೃತಗೊಂಡರೆ ಎಂಬ ಮುಂಜಾಗ್ರತಾ ಕ್ರಮವಾಗಿ ಕಾವ್ಯಾ ಅವರು ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಕಾವ್ಯ ಪ್ರೀತಂಗೌಡ ಅವರು ಸಲ್ಲಿಸಿರುವ ಅಫಿಡೇಟ್‌ನಲ್ಲಿ ಪತಿ ಪ್ರೀತಂಗೌಡರಿಗಿಂತ  ಹೆಚ್ಚು ಆಸ್ತಿ ಹೊಂದಿರುವುದಾಗಿ ತೋರಿಸಿಕೊಂಡಿದ್ದು, ಬಿಜೆಪಿ ಪಕ್ಷದಿಂದ ಒಂದು ಹಾಗೂ ಪಕ್ಷೇತರವಾಗಿ ಒಂದು ಎಂಬಂತೆ ಒಟ್ಟು ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದು, ಪ್ರೀತಂಗೌಡರ ಈ ರಾಜಕೀಯ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಒಡೆದ ಮನೆಯಾಗಿದ್ದ ಜೆಡಿಎಸ್‌ನಲ್ಲಿ ಒಮ್ಮತದ ಗಾಳಿ ಬೀಸಿದ್ದು, ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಭವಾನಿ ರೇವಣ್ಣ ಸೇರಿದಂತೆ ರೇವಣ್ಣ ಕುಟುಂಬ ಬೆನ್ನಿಗೆ ನಿಂತಿದ್ದು, ಪ್ರೀತಂಗೌಡರ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗುವಂತೆ ಮಾಡಿದೆ.

ಇದರೊಟ್ಟಿಗೆ ಜಿಲ್ಲೆಯಲ್ಲಿ ಒಡೆದ ಮನೆಯಂತಾಗಿದ್ದ ಕಾಂಗ್ರೆಸ್ ನಾಯಕರನ್ನೆಲ್ಲಾ ಒಗ್ಗೂಡಿಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಯಶಸ್ವಿಯಾಗಿದ್ದು, ಇಂದು ಹಾಸನದಲ್ಲಿ ಸಾವಿರಾರು ಅಭಿಮಾನಿಗ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಹಾಸನದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳನ್ನು ಸಾಭೀತು ಪಡಿಸಿದ್ಧಾರೆ.

ಒಟ್ಟಿನಲ್ಲಿ ಪ್ರತಿ ಪಕ್ಷಗಳ ಒಮ್ಮತದ ಶಕ್ತಿ ಪ್ರದರ್ಶನ ಗೆಲುವಿನ ನಾಗಾಲೋಟದಲ್ಲಿದ್ದ ಪ್ರೀತಂಗೌಡರ ನಿದ್ದೆಗೆಡಿಸಿರೋದು ಮಾತ್ರ ಸುಳ್ಳಲ್ಲ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 hours ago