ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷದಿಂದ ಮಾನಸಿಕ ವ್ಯಕ್ತಿ ತಿರುಗಾಡಿಕೊಂಡಿದ್ದು ಇವರಿಂದ ಜನರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿತ್ತು. ಈತ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಚಾಲಕರಿಗೂ ಸಮಸ್ಯೆ ಆಗುತ್ತಿತ್ತು. ಹಾಗಾಗಿ ಆನೆ ಮಹಲ್ ಗ್ರಾಮದ ಊರಿನ ಪ್ರಮುಖರು ಈ ಮಾನಸಿಕ ಆಸ್ವಸ್ಥರ ಬಗ್ಗೆ ಗ್ರಾಮ ಪಂಚಾಯಿತಿ ತಿಳಿಸಿದ್ದಾರೆ.
ಆನೆ ಮಹಲ್ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ವೇಣುರವರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಫೋನಿನಲ್ಲಿ ಸಂಪರ್ಕಿಸಿ ಈ ಬಗ್ಗೆ ತಿಳಿಸಿದ್ದಾರೆ.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರು, ಪಂಚಾಯತಿಯ ಲೆಟರ್ ಹಾಗೂ ಪೊಲೀಸ್ ಠಾಣೆಯಿಂದ ಲೆಟರ್ ತರಲು ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದಾರೆ. ನಂತರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರನ್ನು ಖುದ್ದಾಗಿ ಸ್ಥಳಕ್ಕೆ ಹೋದನಂತರ, ಅಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಶ್ರಫ್ ರವರು ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಹುಡುಕಿಕೊಂಡು ಅವರ ಮನೆ ಹತ್ರ ಕರೆದುಕೊಂಡು ಹೋಗಿದ್ದರು.
ಈ ವೇಳೆ ಮನೆಗೆ ಭೇಟಿ ನೀಡಿ ಮಾನಸಿಕ ವ್ಯಕ್ತಿಯನ್ನು ಗ್ರಾಮ ಪಂಚಾಯತಿ ಸದಸ್ಯರಾದ ಅಶ್ರಫ್ ರವರು ಹಾಗೂ ಕರವೇ ಫ್ರಾನ್ಸಿಸ್ ಡಿಸೋಜ ಇಬ್ಬರು ಸೇರಿ ಅವರ ತಲೆ ಕೂದಲನ್ನು, ಗಡ್ಡವನ್ನು ನೀಟಾಗಿ ಕಟ್ ಮಾಡಿ ಬಿಸಿ ನೀರಿನಿಂದ ಸ್ಥಾನಮಾಡಿಸಿ ಒಳ್ಳೆಯ ಬಟ್ಟೆಯನ್ನು ತೊಡಿಸಿ ಬೆಂಗಳೂರಿನ ಆಟೋ ರಾಜ ಸಂಸ್ಥೆಗೆ ಹೋಗಿ ಬಿಟ್ಟು ಬಂದಿದ್ದಾರೆ.
ಈ ಸಂದರ್ಭದಲ್ಲಿ ಬಿಸಿ ನೀರಿನ ವ್ಯವಸ್ಥೆ ಹಾಗೂ ಸ್ನಾನ ಮಾಡಿಸಲು ಬಟ್ಟೆಯ ವ್ಯವಸ್ಥೆ ಹಾಗೂ ಹೇರ್ ಕಟ್ ಮಾಡಿಸಲು ಸಹಕಾರ ಮಾಡಿದ ಗ್ರಾಮ ಪಂಚಾಯತಿ ಸದಸ್ಯರಾದ ಅಶ್ರಫ್ ರವರಿಗೆ, ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ವೇಣು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕರವೇ ಅಧ್ಯಕ್ಷರು ಧನ್ಯವಾದ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆನೆ ಮಹಲ್ ಗ್ರಾಮ ಪಂಚಾಯತಿ ಸದಸ್ಯರಾದ ಅಶ್ರಫ್ ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯದ ವೇಣುಗೋಪಾಲ್ ಮತ್ತು ಕರವೇ ಫ್ರಾನ್ಸಿಸ್ ಡಿಸೋಜಾ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ಕರವೇ ಪ್ರಾಸಿಸ್ ಡಿಸೋಜ ಫೋನ್ ನಂಬರ್.. 9686095831 ಮತ್ತು 9449255831