ಹಾಸನ: ರಾಜ್ಯಾದ್ಯಂತ ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್ಗಳಿಲ್ಲದೆ ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಡಿದರು.
ಹೌದು ಹಾಸನದಲ್ಲಿ ಇಂದು (ಮಾ.01) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ 11 ಗಂಟೆಗೆ ಹಾಸನಕ್ಕೆ ತೆರಲಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಜನರನ್ನು ಕರೆತರಲು ಕೆಎಸ್ಆರ್ಟಿಸಿಯ 700 ಬಸ್ಗಳನ್ನು ಬಳಸಲಾಗುತ್ತಿದೆ.
ಇದರಿಂದ ಹಾಸನ ನಗರ ಮತ್ತು ವಿವಿಧ ಗ್ರಾಮಗಳಿಗೆ ಬಸ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಬಸ್ ಇಲ್ಲದೆ ದ್ವಿತೀಯ ಪಿಯುಸಿ ಮತ್ತು ಪದವಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಪರೀಕ್ಷಾರ್ಥಿಗಳು ಪರದಾಡಿದ್ದಾರೆ.
ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.