News Karnataka Kannada
Sunday, April 28 2024
ಹಾಸನ

ಸಕಲೇಶಪುರ: 4೦ ಎಕರೆ ಒತ್ತುವರಿ ಕಾಫಿ ತೋಟ ತೆರವು

40 acres of encroached coffee plantation removed
Photo Credit : News Kannada

ಸಕಲೇಶಪುರ: ಮೀಸಲು ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾ ಗಿದ್ದ 4೦ ಎಕರೆ ಕಾಫಿ ತೋಟವನ್ನು ಸಕಲೇಶಪುರ ವಲಯ ಅರಣ್ಯ ಇಲಾಖೆ ತೆರವುಗೊಳಿಸಿದೆ.

ತಾಲೂಕಿನ ಹಾನುಬಾಳು ಹೋಬಳಿ ಮರಗಡಿ ಹಾಗೂ ಅಚ್ಚನಹಳ್ಳಿ ವ್ಯಾಪ್ತಿಯಲ್ಲಿ ಸೆಕ್ಷನ್ ೦4 ಹಾಗೂ 17 ಅಡಿಯಲ್ಲಿ ಬರುವ ಸರ್ವೆ ನಂಬರ್54 ರಲ್ಲಿ ಸುಮಾರು 72.2ಎಕರೆ ಮೀಸಲು ಅರಣ್ಯ ವ್ಯಾಪ್ತಿಗೆ ಘೋಷಣೆಯಾಗಿತ್ತು. ಇದರಲ್ಲಿ 39.20 ಕಾಫಿ ತೋಟ ಸನತ್ ಬಿನ್ ರಘುಪತಿ ಸಾಗೋಣ ಸುಮಾರು 40 ವರ್ಷಗಳಿಂದ ಒತ್ತುವರಿ ಮಾಡಿಕೊಂಡಿದ್ದರು.

ಇಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮಕ್ಷಮದಲ್ಲಿ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಗಿದೆ.

ಈ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಹತ್ತಾರು ದಶಕಗಳಿಂದ ಈ ಭಾಗದಲ್ಲಿ ಸಾಗುವಳಿ ಮಾಡುತ್ತಾ ಮನೆ ಕಟ್ಟಿ ಜೀವನ ನಡೆಸುತ್ತಿರುವವರಿಗೆ ನಡುಕ ಉಂಟಾಗಿದೆ.

ರಾಜ್ಯದಲ್ಲಿ ಯಾವುದೆ ಸರ್ಕಾರ ಇಲ್ಲದ ಸಮಯದಲ್ಲಿ ಅರಣ್ಯ ಇಲಾಖೆ ದಬ್ಬಾಳಿಕೆಯಿಂದ ಅರಣ್ಯ ಒತ್ತುವರಿಯನ್ನು ತೆರವುಗೊಳಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ತೆರವು ಕಾರ್ಯಚರಣೆ ವೇಳೆ ಯಾವುದೇ  ಘಟನೆ ನಡೆಯದಂತೆ ಗ್ರಾಮಾಂತರ ಠಾಣಾ ಪೋಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ವಲಯ ಅರಣ್ಯ ಅಧಿಕಾರಿ ಶಿಲ್ಪ, ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್‌ಐ ಬಸವರಾಜ್ ಸೇರಿದಂತೆ ಮುಂತಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು