News Karnataka Kannada
Saturday, May 11 2024
ಹಾಸನ

ಸಕಲೇಶಪುರ: ಅಕ್ರಮ ಮದ್ಯ ಮಾರಾಟ-ಗಡಿಪಾರಿಗೆ ಎಚ್ಚರಿಕೆ

Sakleshpur: Illegal sale of liquor, warns deportees
Photo Credit : News Kannada

ಸಕಲೇಶಪುರ: ಮದ್ಯಪಾನ ದೇಶವ್ಯಾಪಿಯಾಗಿದ್ದು, ಸಾವಿರಾರು ಮಂದಿ ಕುಡಿತದ ವ್ಯಸನಕ್ಕೆ ಬಲಿಯಾಗಿ ಕುಟುಂಬದ ನೆಮ್ಮದಿಯನ್ನೇ ಹಾಳು ಮಾಡುತ್ತಿದ್ದಾರೆ. ಹೆಣ್ಣುಮಕ್ಕಳು ಇದರಿಂದ ಹೆಚ್ಚಿನ ಆತಂಕಕ್ಕೆ ಸಿಲುಕುತ್ತಿದ್ದಾರೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಮಿಥುನ್ ಬೇಸರಿಸಿದರು.

ಪೊಲೀಸರು ರಕ್ಷಣಾ ಕಾರ್ಯ, ಬಂದೋಬಸ್ತ್, ಸಂಚಾರ ನಿಮಯ ಪಾಲನೆ, ಕಳ್ಳತನ, ಕೊಲೆ ಪ್ರಕರಣ ಭೇದಿಸುವುದರಲ್ಲಿಯೇ ಬ್ಯುಸಿ ಆಗಿರುತ್ತಾರೆ. ಆದರೆ, ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ತಮ್ಮ ವ್ಯಾಪ್ತಿಯ ಗ್ರಾಮಗಳನ್ನು ಸಾರಾಯಿ ಮುಕ್ತಗೊಳಿಸಲು ಹೊರಟಿರುವುದು ಶ್ಲಾಘನೆಗೆ ಪಾತ್ರವಾಗಿದೆ ಎಂದರು.

ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಲಟ್ಟಿ, ದಬ್ಬೆಗದ್ದೆ, ಮಾವಿನ ಹಳ್ಳಿ ಗ್ರಾಮದ ಮಹಿಳೆಯರು ಹಾಗೂ ಸಂಘ ಸಂಸ್ಥೆಗಳ ಕಾರ್ಯಕರ್ತರು ತಮ್ಮ ಗ್ರಾಮ ದಲ್ಲಿ ಮದ್ಯ ಮಾರಾಟ ನಿಲ್ಲಿಸಿ ಎಂದು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದು, ಅವರ ಮನವಿಗೆ ಸ್ಪಂದಿಸಿ ಗ್ರಾಮಗಳಿಗೆ ಹೋಗಿ ಮದ್ಯ ಸೇವನೆ ದುಷ್ಟರಿಣಾಮ ಕುರಿತು ಪೊಲೀಸ್ ಇಲಾಖೆಯಿಂದ ತಿಳುವಳಿಕೆ ಹಾಗೂ ಜಾಗೃತಿ ಮೂಡಿಸಲಾಗುತ್ತದೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಮಿಥುನ್ ತಿಳಿಸಿದ್ದಾರೆ.

ಮದ್ಯಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಿದ ನಂತರ ಆ ಗ್ರಾಮದಲ್ಲಿ ಯಾರಾದರೂ ಮದ್ಯ ಮಾರಾಟ ಮಾಡಿದರೆ, ಮದ್ಯ ಸೇವಿಸಿ ಗಲಾಟೆ ಮಾಡಿದರೆ ಮೇಲಿಂದ ಮೇಲೆ ಮದ್ಯ ಸೇವಿಸಿದ ಪ್ರಕರಣ ಕಂಡು ಬಂದರೆ ಅಂತವರನ್ನು ಗ್ರಾಮದಿಂದ ಗಡಿಪಾರು ಮಾಡುವ ಕ್ರಮವನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಲಿದೆ ಎಂದು ಸಹಾಯಕ ಪೊಲೀಸ್ ಅಧಿಕ ಮಿಥುನ್ ಅಕ್ರಮ ಮಧ್ಯ ಮಾರಾಟ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು, ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಗ್ರಾಮೀಣ ಭಾಗವನ್ನು ಸಾರಾಯಿ ಮುಕ್ತ ಗ್ರಾಮ ಮಾಡಲು ಮುಂದಾಗಿರುವುದು ಸ್ವಾಗತಾರ್ಹ. ಜನತೆ ಇದಕ್ಕೆ ಸ್ಪಂದಿಸಬೇಕು.ಕರವೇ ಸ್ವಾಭಿಮಾನಿ ಸೇನೆಯ ಹಾನುಬಾಳು ದಿಲೀಪ್ ಶೈವ ಹೇಳಿದ್ದಾರೆ.

ತಾಲೂಕಿನ ಗ್ರಾಮಾಂತರ ಠಾಣೆಯ ಡಿ.ವೈ.ಎಸ್.ಪಿ, ಸಿಪಿಐ, ಪಿಎಸ್‌ಐ, ಎಎಸ್‌ಐಗಳು ಪ್ರತಿ ಗ್ರಾಮಗಳಲ್ಲಿ ಮದ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ತಿಳಿ ಹೇಳುವ ಕೆಲಸ ಮಾಡುತ್ತಿದ್ದಾರೆ. ಕೆಳ ಹಂತದ ಪೊಲೀಸರು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಣೆ ಮಾಡು ತ್ತಿರುವುದರಿಂದ ಮದ್ಯಪಾನ ಮುಕ್ತ ಗ್ರಾಮಗಳು ಹೆಚ್ಚಾಗುತ್ತಿವೆ. ಗ್ರಾಮಗಳ ಪರಿವರ್ತನೆಗೆ ಪೊಲೀಸ್ ಇಲಾಖೆಯ ಸಹಕಾರ ನೀಡುತ್ತಿದ್ದು, ಇಲಾಖೆಯ ಕಾರ್ಯವೈಖರಿಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಮದ್ಯ ಮುಕ್ತ ಪರಿವರ್ತನೆಯ ಗಾಳಿ ಬೀಸಿದ್ದು, ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ ಕನಸು ಹಂತ -ಹಂತದಲ್ಲಿ ಜಾರಿಗೊಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು