News Karnataka Kannada
Saturday, April 27 2024
ಹಾಸನ

ಸಕಲೇಶಪುರ: ದಿನಸಿ ಅಂಗಡಿಗಳಲ್ಲಿ ಮದ್ಯ ಮಾರಾಟ, ಕ್ರಮಕ್ಕೆ ಒತ್ತಾಯ

Liquor sold in grocery shops, demands action
Photo Credit : News Kannada

ಸಕಲೇಶಪುರ: ಗ್ರಾಮದಲ್ಲಿರುವ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೌಡಳ್ಳಿ ಗ್ರಾಮಸ್ಥರು ಉಪವಿಭಾಗ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆಕಾರರು ಅಕ್ರಮ ಮದ್ಯ ಮಾರಾಟ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಬೇಕಾಗಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕರ್ತವ್ಯ ಆದರೆ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕುಡಿತದ ಚಟಕ್ಕೆ ಯುವ ಜನಾಂಗ ಹಾಗೂ ಕೂಲಿ ಕಾರ್ಮಿಕ ಕುಟುಂಬ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಮಾಮೂಲಿ ವಸೂಲಿಯಲ್ಲಿಯೇ ನಿರಂತರವಾಗಿ ಹಳ್ಳಿಗಳ ನೆಮ್ಮದಿ ಹಾಳು ಮಾಡುತ್ತಿದ್ದಾರೆಂದು ಅಕ್ರೋಶ ವ್ಯಕ್ತಪಡಿಸಿದರು.
ನಿರಂತರವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಅಬಕಾರಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಎಲ್ಲೊ ಕೆಲವು ಕಡೆ ದಾಳಿ ಮಾಡಿದಂತೆ ಪ್ರಚಾರ ಗಿಟ್ಟಿಸಿಕೊಂಡು ಇತರರಿಗೆ ಎಚ್ಚರಿಕೆ ಕೊಡುವ, ಆ ಮೂಲಕ ವಸೂಲಿಯಲ್ಲಿ ನಿರತರಾಗಿದ್ದಾರೆ ಎಂದು ಅರೋಪಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ತಿಮ್ಮಯ್ಯ ಗ್ರಾಮಸ್ಥರಾದ ಜಯ, ಜಯಮ್ಮ , ಮಂಜುಳ, ಕಮಲಾಕ್ಷಿ, ಕುಮಾರಸ್ವಾಮಿ, ಮಂಜುನಾಥ್ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು