ಹಾಸನ: ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಒಂದೇ ಒಂದು ಬಹಳ ದುಃಖ ತಂದಿದೆ. ನಮ್ಮ ಸುತ್ತಮುತ್ತಲಿನ ಜನ ನೋಡಿ ಹೇಳಿದ್ರು. ಈ ರೀತಿ ವಿಡಿಯೋಗಳು ಇದ್ದಾಗ ಬ್ಲರ್ ಮಾಡಬೇಕಿತ್ತು. ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ಸರಿಯಲ್ಲ, ನಾನು ವಿಡಿಯೋ ನೋಡೋಕೆ ಧೈರ್ಯ ಮಾಡಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೇವೇಗೌಡರು, ಕುಮಾರಸ್ವಾಮಿ ಅದರಲ್ಲೂ ದೇವೇಗೌಡರು ಜೀವನ ತೆರದ ಪುಸ್ತಕ. ದೇವೇಗೌಡರಾಗಲಿ ನಮ್ಮ ಅಜ್ಜಿ ಯುವಕರಿಗೆ ಸ್ಫೂರ್ತಿ. ದಂಪತಿಗಳು ಯಾವ ರೀತಿ ಬದುಕಿ ಬಾಳಬೇಕು ಎಂಬದಕ್ಕೆ ಅವರೇ ಉದಾಹರಣೆ ಎಂದು ಹೇಳಿದ್ದಾರೆ.
ದಯಮಾಡಿ ನಾನು ಕೈ ಜೋಡಿಸಿ ಮನವಿ ಮಾಡ್ತೀನಿ. ದೇವೇಗೌಡರಿಗೆ 91-92 ವರ್ಷ ವಯಸ್ಸು. ಸಹಜವಾಗಿ ಈ ಎಲ್ಲ ವಿಷಯ ಕೇಳಿ ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತೆ. ಯಾರು ಸಹ ಊಹೆ ಮಾಡೋಕೆ ಆಗಲ್ಲ. ಈಗಲೂ ಹೇಳಿದ್ರು ಬೆಳಗ್ಗೆ 5 ಗಂಟೆಗೆ ದೇವಸ್ಥಾನಕ್ಕೆ ಹೋಗಿ 9 ಗಂಟೆಗೆ ಬಂದೆ ಅಂತ. ಎಲ್ಲರಿಗಿಂತ ಜಾಸ್ತಿ ನೊಂದಿದ್ದಾರೆ ಎಂದು ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರು ಅಜ್ಜ-ಅಜ್ಜಿ ಬಗ್ಗೆ ಮಾತನಾಡಿದ್ದಾರೆ.
ಈ ಒಂದು ಪ್ರಕರಣದಲ್ಲಿ ರಾಜಕೀಯವಾಗಿ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡ್ತಾ ಇದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…