ಹಾಸನ: ಮಣಿಪುರದಲ್ಲಿ ಕೆಲ ತಿಂಗಳಿನಿಂದ ಕುಕಿ ಮತ್ತು ಮೈತೆಯಿ ಸಂಘಟನೆಗಳ ಸಂಘರ್ಷ ಉಗ್ರ ಸ್ವರೂಪಕ್ಕೆ ತಿರುಗಿದೆ. ನೂರಾರು ಜನರು ಈ ವೇಳೆ ಮೃತಪಟ್ಟಿದ್ದಾರೆ.
ಈ ಪ್ರದೇಶದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕಳೆದ 31 ವರ್ಷಗಳಿಂದ ಸಿಆರ್ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಕೆ.ಆರ್.ಪುರಂನ ಪದ್ಮರಾಜು (52) ಮೃತ ಯೋಧರು.
ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಶುಕ್ರವಾರ ಮಣಿಪುರದಲ್ಲಿ ಮೃತಪಟ್ಟಿದ್ದಾರೆ. ಮೃತ ಯೋಧ ಪದ್ಮರಾಜು ಕಳೆದ 31 ವರ್ಷಗಳಿಂದ ಸಿಆರ್ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಣಿಪುರದಲ್ಲಿ ನಡೆದ ಹಿಂಸಾಚಾರದ ವೇಳೆಯೂ ಅವರು ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.