Categories: ಹಾಸನ

ಹಾಸನದಲ್ಲಿರುವ ಲೂಟಿಕೋರರನ್ನ ಪೊರಕೆಯಿಂದ ಗುಡಿಸಿ- ಅಗಿಲೆ ಯೋಗೇಶ್

ಹಾಸನ: ಹಾಸನದಲ್ಲಿರುವ ಲೂಟಿಕೋರರನ್ನ ಪೊರಕೆ ತೆಗೆದುಕೊಂಡು ಕೆಂಚಟ್ಟಳ್ಳಿಯಿಂದ ಹೊರಗೆ ಊರಾಚೆಗೆ ಗುಡಿಸಿಕೊಂಡು ಹೋಗಿ ಆಚೆಗೆಸೆಯಬೇಕೆಂದು ಪರೋಕ್ಷವಾಗಿ ಶಾಸಕ ಪ್ರೀತಂ ಗೌಡ ವಿರುದ್ಧ ಆಪ್ ಜಿಲ್ಲಾ ಮುಖಂಡ ಅಗಿಲೆ ಯೋಗೇಶ್ ವ್ಯಂಗ್ಯವಾಡಿದರು.

ಆಮ್ ಆದ್ಮ ಪಕ್ಷದ ಜಿಲ್ಲೆ ಹಾಗೂ ವಿವಿಧ ಘಟಕಗಳಿಗೆ ನೂತನವಾಗಿ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವವರ ಪದಗ್ರಹಣ ಕಾರ್ಯಕ್ರಮದಲ್ಲಿ ಶನಿವಾರ ನಗರದ ಖಾಸಗಿ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ವತಿಯಿಂದ ಆಯ್ಕೆ ಪತ್ರ ವಿತರಣೆ ಮಾಡಿ, ಶಾಲು ಹೊದಿಸಿ ಅಭಿನಂದಿಸಲಾಯಿತು.

ಈ ವೇಳೆ ಮಾತನಾಡಿದ ಆಪ್ ರಾಜ್ಯ ಉಪಾಧ್ಯಕ್ಷ ಉಮಾಶಂಕರ್, ದೇಶಾದ್ಯಂತ ನಾವು ಕಟ್ಟುವ ತೆರಿಗೆ ಹಣ ದುರ್ಬಳಕೆಯಾಗುತ್ತಿದೆ. ಜನ ಸಾಮಾನ್ಯರ ತೆರಿಗೆ ಹಣದಿಂದ ರಾಜಕಾರಣಿಗಳು ದೊಡ್ಡವರಾಗುತ್ತಿದ್ದಾರೆ ಎಂದು ಕಿಡಿ ಕಾರಿದರು. ಜನರ ಹಣ ಜನಪರ ಕಾರ್ಯಗಳಿಗೆ ಬಳಕೆ ಆಗಬೇಕು. ಎಲ್ಲೆಡೆ ಭ್ರಷ್ಟಾಚಾರ ನಿಲ್ಲಬೇಕು. ಇದಕ್ಕಾಗಿ ಆಪ್ ಪಕ್ಷ ಹೋರಾಟ ಮಾಡುತ್ತಿದ್ದು, ಎಲ್ಲರೂ ನಮ್ಮೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಜಿಲ್ಲಾ ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ಆಳುವ ಸರ್ಕಾರಗಳ ಎಲ್ಲಾ ರೀತಿಯ ಯೋಜನೆಗಳ ಸವಲತ್ತು ದೇಶದ ಎಲ್ಲಾ ಜನರಿಗೆ ತಲುಪಬೇಕು ಎಂಬುದು ಸಂವಿಧಾನದಲ್ಲೇ ಇದೆ. ಆದರೆ ಕಾನೂನು ಬದ್ಧವಾಗಿ ಜನರಿಗೆ ಏನೆಲ್ಲಾ ಸಿಗಬೇಕಿತ್ತೋ ಅದು ಸಿಗುತ್ತಿಲ್ಲ. ಬಡವರು ಬಡವರಾಗಿಯೇ ಇದ್ದಾರೆ, ಉಳ್ಳವರು ದಿನದಿಂದ ದಿನಕ್ಕೆ ಶ್ರೀಮಂತರಾಗುತ್ತಿದ್ದಾರೆ. ಈ ಅಂತರ, ಅನ್ಯಾಯ ನಿಲ್ಲಬೇಕಾದರೆ ಆಪ್ ಅಧಿಕಾರಕ್ಕೆ ಬರಬೇಕು. ಇದರಿಂದ ಖಂಡಿತಾ ಭ್ರಷ್ಟಾಚಾರ ನಿರ್ಮೂಲನೆಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ತೇಜೂರು ಆನಂದ್, ಮುಖಂಡರಾದ ದಸ್ತಗೀರ್, ಸುಂದರೇಶ್, ಅಕಲ್ ಜಾವೇದ್ ಇತರರಿದ್ದರು.

Gayathri SG

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

8 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

20 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

31 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

40 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

53 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

1 hour ago