ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆಯಾದ ಹಾಸನಾಂಬೆ ದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕಳೆದ ವರ್ಷ ಅಕ್ಟೋಬರ್ 27ಕ್ಕೆ ಬಂದ್ ಆಗಿದ್ದ ದೇಗುಲದ ಬಾಗಿಲು ನಾಳೆ(ನ.02) ಓಪನ್ ಆಗಲಿದೆ.
ಪ್ರತಿ ವರ್ಷ ಅಶ್ವಯುಜ ಮಾಸದ ಮೊದಲ ಗುರುವಾರ ಬಾಗಿಲು ತೆಗೆಯುವುದು ವಾಡಿಕೆ. ಹಾಗಾಗಿಯೇ ನಾಳೆ ಆಧಿಚುಂಚನಗಿರಿ ಮಹಾ ಸಂಸ್ಥಾನ ಪೀಠದ ಪೀಠಾದ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಶ್ರೀಗಳ ಸಾನ್ನಿಧ್ಯದಲ್ಲಿ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಅವರ ಉಪಸ್ಥಿತಿಯಲ್ಲಿ ನಾಳೆ ದೇಗುಲದ ಬಾಗಿಲು ತೆರೆಯಲಿದೆ.
ನಾಳೆ ಮಧ್ಯಾಹ್ನ ಬಾಗಿಲು ತೆರೆದರೆ ಮೊದಲ ದಿನ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮರುದಿನ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ನಂತರದ ದಿನಗಳಲ್ಲಿ ಮುಂಜಾನೆ 4 ಗಂಟೆಯಿಂದ ಮದ್ಯಾಹ್ನ 1-30ರ ವರೆಗೆ ಹಾಗೂ ಮತ್ತೆ 3 ಗಂಟೆಯಿಂದ ಮುಂಜಾನೆ 2 ಗಂಟೆವರೆಗೆ ದರ್ಶನ ಇರಲಿದ್ದು, ಮದ್ಯಾಹ್ನ 1-30ರಿಂದ 3 ಹಾಗು ಮುಂಜಾನೆ 2ರಿಂದ 4 ಗಂಟೆವರೆಗೆ ನೈವೇದ್ಯ ನಡೆಯಲಿದೆ