News Karnataka Kannada
Sunday, April 28 2024
ಹಾಸನ

ಎತ್ತಿನಹೊಳೆ ಕಾಮಗಾರಿ ಅವಾಂತರ: ಹಲವೆಡೆ ಭೂಮಿ ಕಂಪಿಸಿದ ಅನುಭವ

Tremors felt in several parts of Yettinahole
Photo Credit : News Kannada

ಹಾಸನ: ಕರಾವಳಿ ಜನರ ವಿರೋಧದ ನಡುವೆಯೂ ಎತ್ತಿನಹೊಳೆ ಯೋಜನೆ ಕಾಮಗಾರಿ ಸಾಗುತ್ತಿದೆ. ಆದರೆ ಕಳೆದ ಏಳು ವರ್ಷಗಳ ಹಿಂದೆ ಆರಂಭಗೊಂಡಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಹಾಸನ ಜಿಲ್ಲೆಯ ಬಹುತೇಕ ಕಡೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು ಗುರುವಾರ ಸಕಲೇಶಪುರ ತಾಲೂಕಿನ ಕಾಡುಮನೆಯ ಬಳಿಯ ಚೆಕ್‍ಡ್ಯಾಂ ನಿಂದ ಪ್ರಾಯೋಗಿಕವಾಗಿ ನೀರು ಹರಿಸಲಾಗಿದ್ದು, ಆರಂಭದಲ್ಲೇ ಹಲವು ಹಾನಿ ಉಂಟಾಗಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ಹಲವೆಡೆ ಪೈಪ್‍ನಿಂದ ನೀರು ಸೋರಿಕೆಯಾಗಿ ರಸ್ತೆಗೆ ನುಗ್ಗಿದ್ದು ಹಲವು ಪ್ರದೇಶಗಳಿಗೆ ಹಾನಿಯಾಗಿದೆ.

ಭೂಮಿಯೊಳಗೆ ಬೃಹತ್ ಗಾತ್ರದ ಪೈಪ್ ಜೋಡಣೆ ಮಾಡಿದ್ದು, ನೀರು ಹರಿದ ರಭಸಕ್ಕೆ ಹಲವೆಡೆ ಭೂಮಿ ಕಂಪಿಸಿದ್ದು ಕೆಲ ಕಾಲ ಜನರು ಆತಂಕಗೊಂಡಿದ್ದರು. ಭೂಮಿಯೊಳಗೆ ಜೋಡಣೆ ಮಾಡಿದ ಪೈಪ್‍ನಲ್ಲಿ ನೀರು ರಭಸವಾಗಿ ಹರಿದ ಪರಿಣಾಮ ಭೂಮಿ ಕಂಪಿಸಿದಂತಾಗಿದ್ದು, ದೇಖಲ ಗ್ರಾಮದ ಗ್ರಾಮಸ್ಥರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ಧಾರೆ. ನಿನ್ನೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು