News Karnataka Kannada
Wednesday, May 01 2024
ಹಾಸನ

ಕಬಿನಿಯಿಂದ ತಮಿಳುನಾಡಿಗೆ ಆರು ಸಾವಿರ ಕ್ಯುಸೆಕ್ ನೀರು ಬಿಡುಗಡೆ

Water released to Tamil Nadu from Kabini
Photo Credit : By Author

ಎಚ್.ಡಿ.ಕೋಟೆ: ಈ ಬಾರಿ ಮಳೆಯ ಕೊರತೆಯಿಂದ ತಡವಾಗಿ ಕಬಿನಿ ಜಲಾಶಯ ಭರ್ತಿಯಾಗಿತ್ತಾದರೂ ಇದೀಗ ಸುಪ್ರೀಂಕೋರ್ಟ್ ಆದೇಶದಂತೆ ಆರು ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ನೀರನ್ನು ನಂಬಿದ್ದ ಬೆಳೆಗಾರರಲ್ಲಿ ಆತಂಕ ಶುರುವಾಗಿದೆ.

ಹಾಗೆನೋಡಿದರೆ ಪೂರ್ವ ಮುಂಗಾರು ಮಳೆ ಕೈಕೊಟ್ಟರೂ ಕಳೆದ ಜುಲೈ ತಿಂಗಳಲ್ಲಿ ಕೇರಳದ ವೈನಾಡು ಮತ್ತು ಕಬಿನಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಮುಂಗಾರು ಮಳೆ ಆರ್ಭಟಿಸಿದ ಪರಿಣಾಮ ಮೈಸೂರಿನ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಗೊಂಡಿತ್ತು. ಇದೀಗ ಭರ್ತಿಯಾಗಿ 20 ದಿನ ಕಳೆಯುತ್ತಿದ್ದಂತೆಯೇ ಸರ್ಕಾರದಿಂದ ಬಾಗಿನ ಸಲ್ಲಿಸುವ ಮೊದಲೇ ಸುಪ್ರೀಂ ಕೋರ್ಟ್ ಆದೇಶದಂತೆ ಜಲಾಶಯ ಪಕ್ಕದ ಸುಭಾಷ್ ವಿದ್ಯುತ್ ಘಟಕದ ಮೂಲಕ ನೆರೆರಾಜ್ಯ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ಗೂ ಹೆಚ್ಚಿನ ನೀರನ್ನು ಬಿಡಲಾಗಿದೆ. ಇದು ಅಚ್ಚುಕಟ್ಟು ಪ್ರದೇಶದ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಾರಿ ಮುಂಗಾರು ತಡವಾದ್ದರಿಂದ ಜಲಾಶಯದ ನೀರಿನ ಸಂಗ್ರಹಮಟ್ಟ ತೀವ್ರ ಕುಸಿತ ಕಂಡು ಡೆಡ್ ಸ್ಟೋರೆಜ್ ತಲುಪಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿತ್ತು, ಅದರೆ ಕಳೆದ ಜುಲೈ ತಿಂಗಳಲ್ಲಿ ಮುಂಗಾರು ಮಳೆ ಕೇರಳದ ವೈನಾಡು ಹಾಗೂ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಸತತ ಹದಿನೈದು ದಿನಗಳ ಕಾಲ ಎಡಬಿಡದೆ ಸುರಿದ ಪರಿಣಾಮ ಜಲಾಶಯಕ್ಕೆ 30 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದು ಜಲಾಶಯ ಕಳೆದ ಜು.25 ರಂದು ಭರ್ತಿಯಾಗಿ ಮುಂಭಾಗದ ನದಿಗೆ 20 ಸಾವಿರಕ್ಕೂ ಹೆಚ್ಚು ನೀರನ್ನು ಹರಿಸಲಾಗಿತ್ತು.

19.52 ಟಿಎಂಸಿ ಸಾಮರ್ಥ್ಯದ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದು ಎರಡು ವಾರದಲ್ಲಿ ಜಲಾಶಯದ ಗರಿಷ್ಠ ಸಂಗ್ರಹಮಟ್ಟ 2284 ಅಡಿಗಳಿಗೆ ತಲುಪಿ ಭರ್ತಿಗೊಂಡಿದ್ದ ಜಲಾಶಯದಿಂದ ಈಗ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ಜಲಾಶಯದ ಸಂಗ್ರಹಮಟ್ಟದಲ್ಲಿ ದಿಢೀರ್ ಕುಸಿತ ಕಂಡಿದ್ದು, 2279 ಅಡಿಗಳಿಗೆ ಇಳಿದಿದೆ. ಈಗ ಮುಂಗಾರು ಮಳೆ ಕ್ಷೀಣಿಸಿದ್ದು ಮಳೆ ಬರುವ ಲಕ್ಷಣಗಳು ಗೋಚರಿಸದಿದ್ದರೂ ಅಧಿಕಾರಿಗಳ ನಡೆ ತಾಲೂಕಿನ ರೈತರು ಸೇರಿದಂತೆ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ದಿಗ್ಭ್ರಮೆ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು