ಬೇಲೂರು : ಬೆಳ್ಳಂಬೆಳಗ್ಗೆ ಕಾಡಾನೆಗಳ ಗುಂಪು ದಾಳಿ ಮಾಡಿದ ಪರಿಣಾಮ ಆಟೋ ಜಖಂ ಗೊಂಡು ಚಾಲಕ ಹಾಗೂ ಪ್ರಯಾಣಿಕ ಮಹಿಳೆ ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ.
ಆಟೋ ಚಾಲಕ ಮೋಹನ್ ಶಿವಾನಿ(೬೫) ಯವರನ್ನು ಆಟೋದಲ್ಲಿ ಕೂರಿಸಿಕೊಂಡು ಗುಜ್ಜನಹಳ್ಳಿ ಗ್ರಾಮದಿಂದ ಅರೇಹಳ್ಳಿಗೆ ಬರುವಂತಹ ಸಂದರ್ಭದಲ್ಲಿ ೫ ಕಾಡಾನೆಗಳು ಮಿಷನ್ ಕಾಡಿನ ತಿರುವಿನ ಬಳಿ ಅಡ್ಡಬಂದಿವೆ.
ಈ ವೇಳೆ ೨ ಕಾಡಾನೆಗಳು ಚಲಿಸುತ್ತಿದ್ದ ಆಟೋ ಮೇಲೆ ದಾಳಿ ಮಾಡಲು ಮುಂದಾ ದಾಗ ಚಾಲಕ ಆಟೋ ಬಿಟ್ಟು ದೂರ ಹೋಗಿದ್ದಾರೆ. ಮಹಿಳೆ ಮಾತ್ರ ಆಟದಲ್ಲಿ ಕುಳಿತು ಅರಚಾಡಲು ಪ್ರಾರಂಭಿಸಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಕಾಡಾನೆಗಳು ಆಟೋವನ್ನು ರಸ್ತೆಯಿಂದ ತಳ್ಳಿಕೊಂಡು ಚರಂಡಿ ಬಳಿ ಬಿಟ್ಟ ಪರಿಣಾಮ ಆಟೋ ಮುಂಭಾಗ ಜಖಂ ಆಗಿದೆ. ಚಾಲಕ ಆಟೋದಲ್ಲಿ ಕಿರುಚಾ ಡುತ್ತಿದ್ದ ಒಂಟಿ ಮಹಿಳೆಯನ್ನು ಪಾರುಮಾಡಲು ತಾವೂ ಕೂಡ ಜೋರಾಗಿ ಕಿರುಚಿದ್ದರಿಂದ ಆನೆ ಗಳು ಅಲ್ಲಿಂದ ತೆರಳಿವೆ.
ಘಟನೆಯಲ್ಲಿ ಶಿವಾನಿಯವರಗೆ ಗಾಯಗಳಾಗಿವೆ. ಇಂತಹ ಪ್ರಕರಣಗಳು ನಿರಂ ತರವಾಗಿ ಸಂಭವಿಸುತ್ತಿರುವು ದರಿಂದ ಇಲಾಖೆ ವಿರುದ್ಧ ಸಾರ್ವ ಜನಿಕರು ಆಕ್ರೋಶ ಹೊರಹಾಕಿ ಬಡ ಆಟೋ ಚಾಲಕ ಮೋಹನ್ ರವರಿಗೆ ಇಲಾಖೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…