ಹುಲ್ಲಹಳ್ಳಿ: ದನ ಮೇಯಿಸುತ್ತಿದ್ದ ರೈತನ ಮೇಲೆ ಹುಲಿಯೊಂದು ದಾಳಿ ಮಾಡಿದ ಘಟನೆ ಬಳ್ಳೂರುಹುಂಡಿ ಗ್ರಾಮದ ಬಳಿ ನಡೆದಿದ್ದು, ಅದೃಷ್ಟ ವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ನಿವಾಸಿ ರೈತ ಸ್ವಾಮಿದಾಸಯ್ಯ ಎಂಬುವರೇ ಹುಲಿ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಇವರು ತಮ್ಮ ಜಮೀನಿನಲ್ಲಿ ದನ ಮೆಯಿಸುತ್ತಿದ್ದ ವೇಳೆ ಪೊದೆಯಲ್ಲಿ ಇದ್ದ ಹುಲಿ ಏಕಾಏಕಿ ದಾಳಿ ಮಾಡಿದೆ ಇದನ್ನು ಕಂಡ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದ ರೈತರು ಜೋರಾಗಿ ಕಿರುಚಾಡಿದ್ದಾರೆ ಇದರಿಂದ ಗಾಬ್ಬರಿಗೊಂಡ ಹುಲಿಯು ರೈತನನ್ನು ಬಿಟ್ಟು ಪರಾರಿಯಾಗಿದೆ.
ತಕ್ಷಣ ಸ್ಥಳದಲ್ಲಿದ್ದ ರೈತರು ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ತಕ್ಷಣ ಹುಲಿ ದಾಳಿಗೆ ಒಳಗೊಂಡ ರೈತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅದೃಷ್ಟ ವಶಾತ್ ರೈತ ಸ್ವಾಮಿದಾಸಯ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾ.ಪಂ. ಮಾಜಿ ಅಧ್ಯಕ್ಷ ನಾಗೇಶ್ ರಾಜ್ ಮಾತನಾಡಿ ಬಳ್ಳೂರುಹುಂಡಿ ಗ್ರಾಮವು ಕಾಡಾಂಚಿನ ಗ್ರಾಮವಾಗಿದೆ ಇಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ ಇದನ್ನು ತಡೆಗಟ್ಟಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದಡೇ ರೈತರು ಬೆಳೆದ ಫಸಲನ್ನು ನಾಶ ಮಾಡಿದರೆ, ಇನ್ನೊಂದೆಡೆ ಮನುಷ್ಯರನ್ನೇ ಬಲಿ ಪಡೆಯುತ್ತಿವೆ. ಇದರಿಂದ ರೈತರು ಭಯದಲ್ಲಿ ಬದುಕುವಂತಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.