ಮೈಸೂರು : ಸಂಬಂಧಿಕರ ಮನೆಯಿಂದ ತನ್ನ ಮನೆಗೆ ಬಂದ ವ್ಯಕ್ತಿಯ ಶವ ಮನೆಯ ತಾರಸಿ ಮೇಲೆ ಪತ್ತೆಯಾದ ಘಟನೆ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ನಾಗೇಂದ್ರ(36) ತನ್ನ ಮನೆ ತಾರಸಿ ಮೇಲೆ ಶವವಾಗಿ ಪತ್ತೆಯಾದ ವ್ಯಕ್ತಿ. ಪತಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪತ್ನಿ ಮಂಗಳಾ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಂಬದ ಕೆಲಸ ಮಾಡುವ ನಾಗೇಂದ್ರ ಮನೆ ಬಿಟ್ಟರೆ ತಿಂಗಳುಗಳ ಕಾಲ ಬರುತ್ತಿರಲಿಲ್ಲ. ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ತೆರಳಿ ನಂತರ ತನ್ನ ಮನೆಗೆ ಬಂದಿದ್ದಾನೆ. ಪತಿ ಮನೆಗೆ ಬಂದ ವಿಚಾರ ಪತ್ನಿಯ ಗಮನಕ್ಕೆ ಬಂದಿಲ್ಲ. ತಾರಸಿ ಮೇಲೆ ಬಟ್ಟೆ ಒಣಗಿ ಹಾಕಲು ತೆರಳಿದ ಪತ್ನಿಗೆ ತನ್ನ ಪತಿಯ ಮೃತದೇಹ ಕಂಡುಬಂದಿದೆ. ಪತಿಯ ಸಾವು ಅನುಮಾನಾಸ್ಪದವಾಗಿದೆ ಎಂದು ಪತ್ನಿ ಮಂಗಳಾ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಲ್ಲಹಳ್ಳಿಯ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಮತ್ತು ಸಿಬ್ಬಂದಿಗಳು ಘಟನೆಯಾ ವಿಚಾರವಾಗಿ ತನಿಖೆಗೆ ಮುಂದಾಗಿದ್ದಾರೆ.