News Karnataka Kannada
Sunday, April 28 2024
ಮೈಸೂರು

ಮಹಿಷ ದಸರಾ ಮಾಡಲು ನಾನು ಬಿಡಲ್ಲ: ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ಕಿಡಿ

Pratap Simha clarifies on use of lazy sidda word
Photo Credit : Facebook

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿಯವರು ಅಕ್ಟೋಬರ್​ 13 ರಂದು ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ದಸರಾ ಆಚರಣೆಗೆ ತೀರ್ಮಾನ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರತಾಪ್​ ಸಿಂಹ ಅವರು ‘ಮಹಿಷ ದಸರಾ ದಸರಾ ಒಂದು ಅನಾಚಾರ ಅಸಹ್ಯ. ಇದು ಸಿದ್ದರಾಮಯ್ಯ ಸಿಎಂ ಆದಾಗ ಆರಂಭವಾಗಿತ್ತು. ಬಳಿಕ ನಮ್ಮ ಸರ್ಕಾರ ಬಂದಾಗ ಇದನ್ನು ನಿಲ್ಲಿಸಿದ್ದೆವು.

ಆದರೆ ಈಗ ಮತ್ತೆ ಮಹಿಷ ದಸರಾ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಅನಾಚಾರ ಮಾಡಲು ಅವಕಾಶ ಕೊಡಬೇಡಿ ಎಂದು ಜಿಲ್ಲಾಡಳಿತ, ಸರ್ಕಾರ ಹಾಗೂ ಪೊಲೀಸರಿಗೆ ಪ್ರತಾಪ್ ಸಿಂಹ ಅವರು ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಿಮಗೆ ಮಹಿಷಾಸುರನ ಮೇಲೆ ಭಕ್ತಿ ಇದ್ದರೆ, ನಿಮ್ಮ ಮನೆಯಲ್ಲಿ ಪೋಟೋ ಇಟ್ಟುಕೊಂಡು ನಿಮ್ಮ ತರಾ ಮಗನನ್ನು ದಯಪಾಲಿಸು ಎಂದು ಪೂಜೆ ಮಾಡಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಇದು ಸರಿ ಅಲ್ಲ. ಒಂದು ವೇಳೆ ಜಿಲ್ಲಾಡಳಿತ ಅವಕಾಶ ಕೊಟ್ಟರೆ, ನಾವು ಹೋಗಿ ಅಸಹ್ಯವನ್ನು ತಡೆಯುತ್ತೇವೆ. ಕಾನೂನು ಸಂಘರ್ಷಕ್ಕೆ ಅವಕಾಶ ಮಾಡಿ ಕೊಡಬೇಡಿ ನಾವು ಸಂಘರ್ಷಕ್ಕೂ ಸಿದ್ದರಾಗಿದ್ದೇವೆ. ಮಹಿಷ ದಸರಾ ದಿನ ನಾನು ಅಲ್ಲೇ ಇರ್ತೀನಿ. ಸಂಘರ್ಷ ಆದ್ರೂ ಪರ್ವಾಗಿಲ್ಲ. ಮಹಿಷ ದಸರಾ ಮಾಡಲು ನಾನು ಬಿಡಲ್ಲ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು