Categories: ಮೈಸೂರು

ಮಹಿಷ ದಸರಾ ಮಾಡಲು ನಾನು ಬಿಡಲ್ಲ: ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ಕಿಡಿ

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿಯವರು ಅಕ್ಟೋಬರ್​ 13 ರಂದು ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ದಸರಾ ಆಚರಣೆಗೆ ತೀರ್ಮಾನ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರತಾಪ್​ ಸಿಂಹ ಅವರು ‘ಮಹಿಷ ದಸರಾ ದಸರಾ ಒಂದು ಅನಾಚಾರ ಅಸಹ್ಯ. ಇದು ಸಿದ್ದರಾಮಯ್ಯ ಸಿಎಂ ಆದಾಗ ಆರಂಭವಾಗಿತ್ತು. ಬಳಿಕ ನಮ್ಮ ಸರ್ಕಾರ ಬಂದಾಗ ಇದನ್ನು ನಿಲ್ಲಿಸಿದ್ದೆವು.

ಆದರೆ ಈಗ ಮತ್ತೆ ಮಹಿಷ ದಸರಾ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಅನಾಚಾರ ಮಾಡಲು ಅವಕಾಶ ಕೊಡಬೇಡಿ ಎಂದು ಜಿಲ್ಲಾಡಳಿತ, ಸರ್ಕಾರ ಹಾಗೂ ಪೊಲೀಸರಿಗೆ ಪ್ರತಾಪ್ ಸಿಂಹ ಅವರು ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಿಮಗೆ ಮಹಿಷಾಸುರನ ಮೇಲೆ ಭಕ್ತಿ ಇದ್ದರೆ, ನಿಮ್ಮ ಮನೆಯಲ್ಲಿ ಪೋಟೋ ಇಟ್ಟುಕೊಂಡು ನಿಮ್ಮ ತರಾ ಮಗನನ್ನು ದಯಪಾಲಿಸು ಎಂದು ಪೂಜೆ ಮಾಡಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಇದು ಸರಿ ಅಲ್ಲ. ಒಂದು ವೇಳೆ ಜಿಲ್ಲಾಡಳಿತ ಅವಕಾಶ ಕೊಟ್ಟರೆ, ನಾವು ಹೋಗಿ ಅಸಹ್ಯವನ್ನು ತಡೆಯುತ್ತೇವೆ. ಕಾನೂನು ಸಂಘರ್ಷಕ್ಕೆ ಅವಕಾಶ ಮಾಡಿ ಕೊಡಬೇಡಿ ನಾವು ಸಂಘರ್ಷಕ್ಕೂ ಸಿದ್ದರಾಗಿದ್ದೇವೆ. ಮಹಿಷ ದಸರಾ ದಿನ ನಾನು ಅಲ್ಲೇ ಇರ್ತೀನಿ. ಸಂಘರ್ಷ ಆದ್ರೂ ಪರ್ವಾಗಿಲ್ಲ. ಮಹಿಷ ದಸರಾ ಮಾಡಲು ನಾನು ಬಿಡಲ್ಲ ಎಂದಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago