Categories: ಮೈಸೂರು

ಬೇಲಿಯೇ ಎದ್ದು ಹೊಲ ಮೇಯ್ದರೆ: ಪಾರ್ಕ್‌ನಲ್ಲಿ ಅನಧಿಕೃತ ಪಾರ್ಕಿಂಗ್‌

ಮೈಸೂರು: ಮೈಸೂರಿನ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿ ಎಡಭಾಗದಲ್ಲಿ ಇರುವ ಉದ್ಯಾನವನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿರುವುದು ಅಕ್ಷಮ್ಯ ಅಪರಾಧ ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ ಹೇಳಿದೆ.

ಸಂಘಟನೆಗೆ ಸಾರ್ವಜನಿಕರು ಸಮಸ್ಯೆಗೆ ಬಗ್ಗೆ ಕರೆ ಮಾಡಿ ತಿಳಿಸಿದ್ದು ಸಂಘಟನೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ನೋಡಿದಾಗ ವಾಹನ ನಿಲುಗಡೆ ಮಾಡಿ ಉದ್ಯಾನವನವನ್ನು ಹಾಳು ಮಾಡಲು ಮುಂದಾಗಿದ್ದಾರೆ. ಅಲ್ಲದೆ ಈ ಬಗ್ಗೆ ಅರಣ್ಯ ಕಚೇರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಈ ವಿಷಯ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ವಿಷಯ ಎಂದು ತಿಳಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಮಾತನಾಡಿ ವಿಷಯ ತಿಳಿಸಿದಾಗ ಅವರು ಪೋಲಿಸ್ ಇಲಾಖೆಗೆ ಹೇಳಿ ಎಂದು ಹೇಳಿದ್ದಾರೆ.

ಸಂಘಟನೆಯವರು ಪಾಲಿಕೆ ಗಮನ ಹರಿಸಬೇಕು ಎಂದು ಹೇಳಿದಾಗ ಆಯುಕ್ತರು ವಾಹನಗಳನ್ನು ತೆರವು ಗೊಳಿಸಲು ತಿಳಿಸುತ್ತೇವೆ ಎಂದು ಹೇಳಿದ್ದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದೆವು. ಅವರು ಕೂಡ ವಾಹನ ನಿಲುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಧಿಕಾರಿಗಳೇ ಉದ್ಯಾನವನದಲ್ಲಿ ಪಾರ್ಕಿಂಗ್‌ ಗೆ ಅವಕಾಶ ನೀಡಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ.

ಈ ಬಗ್ಗೆ ಸ್ಥಳದಲ್ಲಿ ಇದ್ದ ಪೋಲಿಸ್ ಅಧಿಕಾರಿಗಳನ್ನು ವಿಚಾರಿಸಿದಾಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಹಾಗಾದರೆ ಸಾಮಾನ್ಯ ಜನರು ತಪ್ಪು ಮಾಡಿದರೆ ದಂಡ ವಸೂಲಿ ಮಾಡುವ ಅಧಿಕಾರಿಗಳು ಅಧಿಕಾರಿಗಳೇ ತಪ್ಪು ಮಾಡಿ ಕಾನೂನು ಉಲ್ಲಂಘನೆ ಮಾಡಿದಾಗ ಇವರಿಗೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸವುದು ಯಾರು? ಎಂದು ಸಂಘಟನೆ ಪ್ರಶ್ನೆ ಮಾಡಿದೆ. ಅಲ್ಲದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗದ ಸಂಸ್ಥಾಪಕ ಅಧ್ಯಕ್ಷರು ಡಿಪಿಕೆ ಪರಮೇಶ್ ಆಗ್ರಹಿಸಿದ್ದಾರೆ.

Ashika S

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

17 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

29 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

55 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

2 hours ago