ಮೈಸೂರು

ಹೃದಯವಂತ ಕನ್ನಡಿಗರ ಬಳಗದಿಂದ ಕನ್ನಡ ಅರಿವು ಅಭಿಯಾನ

ಮೈಸೂರು: ಮೈಸೂರಿನಲ್ಲಿ ಕನ್ನಡವನ್ನು ಕಡೆಗಣಿಸಿ ಆಂಗ್ಲಭಾಷೆಯಲ್ಲಿ ವ್ಯವಹರಿಸುತ್ತಿರುವ ಬಗ್ಗೆ ಮೈಸೂರು ಹೃದಯವಂತ ಕನ್ನಡಿಗರ ಬಳಗಕ್ಕೆ ದಿನಪ್ರಂತಿ ಸಾರ್ವಜನಿಕರು ಕರೆ ಮಾಡಿ ದೂರು ನೀಡುತ್ತಿದ್ದಾರೆ.

ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸದೇ ಇರುವುದು ನಿಜವಾಗಿಯೂ ಖೇದಕರ. ಈ ನಿಟ್ಟಿನಲ್ಲಿ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಒಂದು ದಿನದ ಮಟ್ಟಿಗೆ ಕನ್ನಡ ಹರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದೆ ಸಂದರ್ಭದಲ್ಲಿ ಗೋಕುಲಂ ಕಾಳಿದಾಸ ರಸ್ತೆಯು ಮುಖ್ಯ ರಸ್ತೆಯಲ್ಲಿ ಇರುವ ಓನೇಸ್ತಾ ಎಂಬ ಪೀಜಾ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ನೋಡಿದಾಗ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ನಾವು ಸಂಬಂಧಿಸಿದ ಅಂಗಡಿ ಮಾಲೀಕರ ಬಳಿ ಕನ್ನಡದ ಬಗ್ಗೆ ಮಾತನಾಡಿದಾಗ ಅವರಿಗೆ ಕನ್ನಡ ಮೊದಲು ಹಾಕಬೇಕು ಎಂದು ಗೊತ್ತಿಲ್ಲ ಆದ್ದರಿಂದ ತಪ್ಪಾಗಿದೆ. ಇದರ ಬಗ್ಗೆ ನಮಗೆ ಯಾರೂ ಸಹ ಮಾಹಿತಿ ನೀಡಿಲ್ಲ ಆದ್ದರಿಂದ 15-20 ದಿನಗಳಲ್ಲಿ ಆಂಗ್ಲಭಾಷೆಯಲ್ಲಿ ಇರುವ ನಾಮಫಲಕ ತೆರವು ಗೊಳಿಸಿ ಕನ್ನಡ ನಾಮಫಲಕ ಹಾಕುತ್ತೇವೆ ಎಂದು ಒಪ್ಪಿಕೊಂಡರು.

ಆದರೆ ಈ ಸಂಬಂಧಿಸಿದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಸುಮಾರು 5-6 ವರ್ಷಗಳಿಂದ ಕನ್ನಡ ನಾಮಫಲಕಗಳಿಗೆ ಸಂಬಂಧಿಸಿದ ಹಾಗೆ ಕನ್ನಡ ಸಾಂಸ್ಕೃತಿಕ ಇಲಾಖೆ, ಮೈಸೂರು ಮಹಾನಗರ ಪಾಲಿಕೆಗೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಸರ್ಕಾರಿ ಕೆಲಸದಲ್ಲಿ ಯಾಕೆ ಮುಂದುವರಿಯಬೇಕು. ಸರ್ಕಾರಿ ಸಂಬಳ ಪಡೆಯಲು ಇವರಿಗೆ ನಾಚಿಕೆ ಆಗಲ್ವೇ ಈ ಕೂಡಲೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಳಗದ ಸಂಸ್ಥಾಪಕ ಅಧ್ಯಕ್ಷರು ಡಿಪಿಕೆ ಪರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಕನ್ನಡ ಬೋರ್ಡ್‌ ಅಳವಡಿಕೆಗೆ ಅಂಗಡಿ ಮಾಲೀಕರಿಗೆ ಬಳಗದ ವತಿಯಿಂದ ಒಂದು ವಾರಗಳ ಕಾಲ ಗಡುವು ನೀಡಿ ಎಚ್ಚರಿಸಲಾಯಿತು ಇದೆ ಸಂದರ್ಭದಲ್ಲಿ ಬಳಗದ ಸಂಸ್ಥಾಪಕ ಅಧ್ಯಕ್ಷರು ಡಿಪಿಕೆ ಪರಮೇಶ್, ಉಪಾಧ್ಯಕ್ಷ ಪಿ ವಿ ಕುಮಾರ್, ಕಾರ್ಯದರ್ಶಿ ಮನೋಜ್ ಕುಮಾರ್ ,ರವಿ, ಮಹೇಶ್, ಬಸವಣ್ಣ, ನಾಗೇಂದ್ರ, ನಂಜಪ್ಪ, ಚಂದ್ರ ಚಾರಿ ಉಪಸ್ಥಿತರಿದ್ದರು.

Ashika S

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

10 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

16 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

31 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

47 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago