News Karnataka Kannada
Tuesday, April 30 2024
ಮೈಸೂರು

ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರ ಇಡಿ: ಸದಾನಂದ ಗೌಡ

ಪಕ್ಷ ಸಂಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ.
Photo Credit : News Kannada

ಮೈಸೂರು: ಪಕ್ಷ ಸಂಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದೆ, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿರುವುದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಸಂಘಟನೆಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದರು.

ಮೊದಲು ಅಸಮಾಧಾನ ಇರುವವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ, ಮಂದಿರಕ್ಕೆ ಹೋಗಿ ಎಂದು ಸಲಹೆ ಮಾಡಿದರು.

ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್, ಯಡಿಯೂರಪ್ಪ ಅವರ ಗುಂಪುಗಳಿದ್ದವು. ನಾನು ಪ್ರತಿ ದಿನ ಎಲ್ಲರ ಮನೆಗೆ ಹೋಗಿ ಬೆಣ್ಣೆ ಹಿಡಿದು ನೈಸ್ ಮಾಡಿದ್ರೆ ಅದೇ ರೀತಿ ಎಲ್ಲರ ಮನವೊಲಿಸಿ, ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು