Categories: ಮಡಿಕೇರಿ

ಕರ್ನಾಟಕ ಹಕ್ಕಿ ಹಬ್ಬಕ್ಕೆ ಅರಣ್ಯ ಸಚಿವರಿಂದ ಚಾಲನೆ

ಮಡಿಕೇರಿ: ಅರಣ್ಯ ಇಲಾಖೆ ಹಾಗೂ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ೮ನೇ ಆವತ್ತಿಯ ಕರ್ನಾಟಕ ಹಕ್ಕಿ ಹಬ್ಬಕ್ಕೆ ಶುಕ್ರವಾರ ಅರಣ್ಯ ಸಚಿವರಾದ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು.

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ ಬೋಪಯ್ಯ ಅವರು ಮಾತನಾಡಿ ಪಕ್ಷಿಗಳು ಮನುಷ್ಯನ ಜೀವನದಲ್ಲಿ ಆಸುಹೋಕ್ಕಾಗಿದೆ. ಸಂಜೆ ವೇಳೆಯಲ್ಲಿ ಮನೆಯ ಪಕ್ಕದ ಮರಗಳಲ್ಲಿ ಕುಳಿತ ಪಕ್ಷಿಗಳನ್ನು ವಿಕ್ಷೀಸುವುದು ಒಂದು ಸುಂದರ ಕ್ಷಣ. ಅಳಿವಿನ ಅಂಚಿನಲ್ಲಿರುವ ಪಕ್ಷಿಗಳ ಸಂರಕ್ಷಣೆ ಮತ್ತು ಅದರ ಪಾತ್ರ ಮತ್ತು ಮಹತ್ವವು ಪಕ್ಷಿ ಹಬ್ಬ ಕಾರ್ಯಕ್ರಮದ ಮೂಲಕ ಒಂದು ಒಳ್ಳೆಯ ಸಂದೇಶ ಜನರಿಗೆ ತಲುಪುವಂತಾಗಬೇಕು ಎಂದರು.

ವನ್ಯ ಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ್ ಗೋಗಿ ಅವರು ಮಾತನಾಡಿ ಪ್ರಕೃತಿಯಲ್ಲಿ ಪ್ರತಿಯೊಂದು ವಿಷಯವು ಒಂದಕ್ಕೊಂದು ಅವಲಂಬಿಸಿಕೊಂಡಿದೆ. ಗಿಡ ಮರಗಳು, ಪಕ್ಷಿಯನ್ನು, ಪಕ್ಷಿಗಳು ಕೂಡ ಮರ ಗಿಡಗಳನ್ನು ಅವಲಂಬಿಸಿಕೊಡಿದೆ. ಹಲವಾರು ವಿಧದ ಸಸ್ಯಗಳ ಪರಾಗಸ್ಪರ್ಶಕ್ಕೆ ಪಕ್ಷಿಗಳು ಸಹಾಕಾರಿಯಾಗಿದೆ. ಗಿಡಗಳ ಬೆಳವಣಿಗೆಗೆ ಪಕ್ಷಿಗಳು ಕೂಡ ಮನುಷ್ಯನಂತೆ ಪ್ರಮುಖ ಪಾತ್ರ ವಹಿಸುತ್ತದೆ. ಹಕ್ಕಿಗಳಿಂದ ಸುತ್ತಲಿನ ಪರಿಸರವು ಬಣ್ಣಮಹವಾಗಿ ಕಾಣುತ್ತದೆ. ವ್ಶೆಜ್ಞಾನಿಕ ಮನೋಬಾವದ ಜೊತೆಗೆ ಪ್ರಕೃತಿಯ ಬಗ್ಗೆ ಒಲವು ತೋರಲು ಪಕ್ಷಿಗಳು ಸಹಕಾರಿಯಾಗಿದೆ. ಪಕ್ಷಿಗಳು ಒಟ್ಟಾಗಿ ಜೀವನ ನಡೆಸುತ್ತವೆ. ಹಕ್ಕಿಗಳು ಒಂದು ಕಡೆಯಿಂದ ಇನ್ನೊಂದು ಕಡೆಗೆ ಒಟ್ಟಾಗಿ ತೆರಳುತ್ತದೆ. ಪಕ್ಷಿಗಳು ತಮ್ಮದೇ ಆದ  ಸಂವಹನ ನಡೆಸುತ್ತದೆ. ಇದು ಮನುಷ್ಯನಿಗೆ ಅರ್ಥವಾಗುವುದು ಕಷ್ಟ. ಆದರೆ ಪಕ್ಷಿಗಳಿಗೆ ಅದು ಅರ್ಥವಾಗುತ್ತದೆ ಎಂದು ಅವರು ಹೇಳಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ಕೊಡಗು ಜಿಲ್ಲೆಯೂ ಪಶ್ಚಿಮ ಘಟ್ಟಗಳ ಮತ್ತು ಬಯಲು ಸೀಮೆಯ ನಡುವೆ ಪ್ರಾಕೃತಿಕ ಸಂಪತ್ತನ್ನು ಹೊಂದಿದೆ. ದಟ್ಟ ಕಾಡುಗಳು ಹಾಗೂ ಹಲವಾರು ಪವಿತ್ರ ಮರಗಳ ತೋಪುಗಳಿಂದ ಸಮೃದ್ಧವಾಗಿದೆ. ಮುನ್ನೂರಕ್ಕೂ ಹೆಚ್ಚು ವಿವಿಧ ಪ್ರಬೇಧ ಪಕ್ಷಿಗಳಿದ್ದು, ಈ ಪ್ರದೇಶವನ್ನು ಪಕ್ಷಿಗಳು ಮನೆ ಮಾಡಿಕೊಂಡಿವೆ. ಇವುಗಳ ಜೊತೆಗೆ ಪ್ರತಿ ವರ್ಷ ಹಲವಾರು ವಲಸೆ ಪಕ್ಷಿಗಳು ಮಲೆನಾಡು ಪ್ರದೇಶಗಳಿಗೆ ಭೇಟಿ ನೀಡುತ್ತವೆ ಎಂದರು.

ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಎಸ್.ರವಿಕುಶಾಲಪ್ಪ, ಶಾಸಕರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಮೈಸೂರು ಹಾಗೂ ಕೊಡಗು ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್, ಸರಸ್ವತಿ ಮಿಶ್ರ, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕಾ.ರಾಮೇಶ್ವರಪ್ಪ, ಅರಣ್ಯ ಕಾಲೇಜಿನ ಸಿ.ಜಿ.ಕುಶಾಲಪ್ಪ. ಮಡಿಕೇರಿ ವನ್ಯಜೀವಿ ಉಪ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ಉಪ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಇತರರು ಇದ್ದರು.

Swathi MG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

1 hour ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago