News Karnataka Kannada
Thursday, May 09 2024
ಮಡಿಕೇರಿ

ಕಾಡಾನೆಗಳ ದಾಳಿಯಿಂದ ಕಾಫಿ ನಾಶ : ಅಪಾರ ನಷ್ಟ

Elephant
Photo Credit :

ಮಡಿಕೇರಿ : ತೋಟ ಮತ್ತು ಕಾಫಿ ತುಂಬಿದ ಚೀಲಗಳ ಮೇಲೆ ಕಾಡಾನೆಗಳ ಹಿಂಡು ದಾಳಿ ಮಾಡಿ ನಷ್ಟ ಉಂಟು ಮಾಡಿರುವ ಘಟನೆ ಸೋಮವಾರಪೇಟೆ ಸಮೀಪದ ತೋಳೂರು ಶೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡು ವಾರಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಭಾನುವಾರ ಆರಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಗ್ರಾಮದ ಸಜನ್ ಎಂಬವರ ತೋಟಕ್ಕೆ ನುಗ್ಗಿ ಕಾಫಿ ತುಂಬಿದ ಚೀಲಗಳನ್ನು ನಾಶ ಮಾಡಿದೆ. ಕಾಫಿ ಗಿಡ, ಬಾಳೆ, ಬೈನೆ ಮರಗಳನ್ನು ಧ್ವಂಸಗೊಳಿಸಿದೆ. ಅಕ್ಕಪಕ್ಕದ ತೋಟಗಳಿಗೂ ಲಗ್ಗೆ ಇಟ್ಟಿರುವ ಗಜಪಡೆ ಅಪಾರ ನಷ್ಟವನ್ನುಂಟು ಮಾಡಿದೆ.

ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿಯಲ್ಲಿರುವ ಕೃಷಿಕ ವರ್ಗ ಅರಣ್ಯ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅರಣ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಬೇಕು, ಕಾಡಾನೆಗಳನ್ನು ಕಾಡಿಗಟ್ಟಬೇಕು ಮತ್ತು ವನ್ಯಜೀವಿಗಳ ಉಪಟಳ ತಡೆಗೆ ಶಾಶ್ವತ ಪರಿಹಾರ ಸೂಚಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು