ಮಡಿಕೇರಿ : ಕಾರು ಅಪಘಾತಕ್ಕೀಡಾಗಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಕುಟ್ಟ ಗ್ರಾಮದ ಬಳಿ ನಡೆದಿದೆ.
ಕೇರಳ ರಾಜ್ಯದ ಎರ್ನಾಕುಲಂ ನಗರದ ನಿವಾಸಿ ಡಾ.ಮನೋಜ್ ಈಪನ್ ಮ್ಯಾಥ್ಯೂ (55) ಹಾಗೂ ಅವರ ಪುತ್ರ ಜಯಾಜ್ (10) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆಯ ಮೇಲ್ವಿಚಾರಣೆಗಾಗಿ ಬಂದು ಸಂಜೆ ವಾಪಾಸ್ಸಾಗುತ್ತಿದ್ದಾಗ ಡಾ.ಮನೋಜ್ ಈಪನ್ ಅವರ ಕಾರು ನಿಯಂತ್ರಣ ಕಳೆದುಕೊಂಡು ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡರು. ವೀರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.