News Karnataka Kannada
Monday, April 29 2024
ಮಡಿಕೇರಿ

ಕಾವೇರಿ ತೀರ್ಥೋದ್ಭವ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ರಾಜಕೀಯ: ಕೆ. ಜಿ. ಬೋಪಯ್ಯ ಆರೋಪ

Bopayya
Photo Credit :

ಮಡಿಕೇರಿ: ಕಾವೇರಿ ತೀರ್ಥೋಧ್ಭವದ ವಿಚಾರದಲ್ಲಿ ಕಾಂಗ್ರಸ್ಸಿಗರು ವಿನಾ ಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದರು.

ಗೋಣಿಕೊಪ್ಪಲಿನ ಆರ್ ಎಂ ಸಿಯಲ್ಲಿ ನಡೆದ ಸೇವಾ ಸಮರ್ಪಣಾವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅ.2ರಂದು ನಡೆದ ಸಭೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೂ ಕಾಂಗ್ರಸ್ಸಿಗರು ಪತ್ರಿಕಾಗೋಷ್ಠಿ ನಡೆಸಿ ಭಕ್ತರಿಗೆ ನಿರ್ಬಂಧ ಹೇರಲಾಗುತ್ತಿದೆ ಎಂದು ಹುಯಿಲೆಬ್ಬಿಸಿದ್ದಾರೆ ಎಂದು ಆರೋಪಿಸಿದರು.

ತುಲಾ ಸಂಕ್ರಮಣದ ತೀರ್ಥೋದ್ಭವದ ಸಂದರ್ಭ ಭಾಗವಹಿಸಲು ಮುಕ್ತ ಅವಕಾಶ ಮಾಡಿಕೊಡುವುದಾಗಿ ಈ ಸಂದರ್ಭ ಹೇಳಿದ ಬೋಪಯ್ಯ, ಗುರುವಾರ ನಡೆಯುವ ಸಭೆಯಲ್ಲಿ ಭಕ್ತರ ಪರವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ, ಕೋವಿಡ್ ನಿಯಮಾವಳಿಗಳನ್ನು ಭಕ್ತಾದಿಗಳು ಕಡ್ಡಾಯವಾಗಿ ಪಾಲಿಸಿ, ಭಾಗವಹಿಸಬಹುದು. ಭಕ್ತಾದಿಗಳು ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಬೋಪಯ್ಯ ಇದೇ ಸಂದರ್ಭ ಮನವಿ ಮಾಡಿಕೊಂಡರು.

ಕಾವೇರಿ ಪವಿತ್ರ ತೀರ್ಥೋದ್ಭವ ಸಂದರ್ಭ ಕೊಡಗಿನ ಭಕ್ತರು ಪಾಲ್ಗೊಳ್ಳಲು ಮುಕ್ತ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ ಅವರು, ವಾಹನ ಸಂಚಾರ ಕುರಿತು ಗುರುವಾರದ ಸಭೆಯಲ್ಲಿ ಚರ್ಚಿಸಿ ನಂತರ ತೀರ್ಮಾನಿಸಲಾಗುವುದು ಎಂದರು.

ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಜ್ಯ ಬಿ‌ಜೆಪಿ ಮುಖಂಡ ಮೋಣಪ್ಪ ಭಂಡಾರಿ ಅವರು, ಜಿಲ್ಲೆಯ ಅಭಿವೃದ್ಧಿ, ದೇಶದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯವೈಖರಿ, ಪಕ್ಷ ಸಂಘಟನೆ, ಮುಂಬರುವ ಚುನಾವಣೆಗಳ ಸಿದ್ಧತೆ ಮತ್ತಿತರ ಹಲವು ವಿಚಾರಗಳ ಬಗ್ಗೆ ವಿವರಿಸಿದರು.

ಜಿಲ್ಲಾ ಬಿ‌.ಜೆ.ಪಿ ಅಧ್ಯಕ್ಷ ರಾಬಿನ್ ದೇವಯ್ಯ, ರಾಜ್ಯ ಘಟಕದ ಮನು ಮುತ್ತಪ್ಪ, ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ರೀನಾ ಪ್ರಕಾಶ್, ತಾಲೂಕು ಅಧ್ಯಕ್ಷ ನೆಲ್ಲೀರ ಚಲನ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು