News Karnataka Kannada
Saturday, April 27 2024
ಮಡಿಕೇರಿ

ಕುಶಾಲನಗರದಲ್ಲಿ ಬಂದ್ ಬದಲಿಗೆ ಪ್ರತಿಭಟನಾ ಮೆರವಣಿಗೆ

New Project 2021 09 26t172726.088
Photo Credit :

ಕುಶಾಲನಗರ: ಸೋಮವಾರ ಬಂದ್ ಬದಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಕೊಡಗು ಜನಾಂದೋಲನ ಪ್ರಮುಖ ವಿ.ಪಿ.ಶಶಿಧರ್ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕೊರೊನದಿಂದಾಗಿ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ ಈ ನಡುವೆ ಬಂದ್ ಮಾಡಿಸಿ ನಮ್ಮವರಿಗೆ ನಾವೇ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ ರೈತರಿಗೆ ನ್ಯಾಯ ಕೊಡಿಸುವುದು ನಮ್ಮ ಸದುದ್ದೇಶವಾಗಬೇಕು ಎಂದರು.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಐತಿಹಾಸಿಕವಾದುದು. ಸಂವೇದನಾ ಇಲ್ಲದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ರೈತರನ್ನು ಭಿಕ್ಷುಕನಾಗಿಸುವ ಪರಿಸ್ಥಿತಿ ಎದುರಾಗಲಿದೆ. ಈ ಕೆಟ್ಟ ಧೋರಣೆಯನ್ನು ಖಂಡಿಸಿ ಹೋರಾಡಬೇಕಿದೆ ಎಂದರು.

ಈ ಸಂದರ್ಭ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ರಮೇಶ್ ಮಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧ ನೀತಿ ಕೃಷಿ ಮಾರುಕಟ್ಟೆ ನೀತಿ ತಿದ್ದುಪಡಿ ಮಾಡುವುದರ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆಯ ಸಂಪೂರ್ಣ ಅಧಿಕಾರವನ್ನು ಮೊಟಕು ಗೊಳಿಸಲಾಗುತ್ತಿದೆ ಇಂತಹ ಕೆಟ್ಟ ನೀತಿಯನ್ನು ರದ್ದು ಪಡಿಸಬೇಕು ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಇದೇ ಸಂದರ್ಭ ಹಸಿರು ಸೇನೆಯ ಕುಶಾಲನಗರ ತಾಲೂಕು ಅಧ್ಯಕ್ಷ ಜವರಪ್ಪ ಮಾತನಾಡಿ ಕೇಂದ್ರ ಸರ್ಕಾರದ ಕೃಷಿ  ವಿರೋಧಿ ನೀತಿಯಿಂದ ರೈತರು ಜೀವನ ನಡೆಸುವುದೇ ಮುಂದಿನ ದಿನಗಳಲ್ಲಿ ಕಷ್ಟಕರ ವಾಗಲಿದೆ. ರೈತರು ಬೆಳೆದ ಬೆಳೆಗಳಿಂದ ಜೀವನ ನಡೆಸುವ ಮೋದಿ ರೈತರ ವಿರೋಧ ನೀತಿ ಜಾರಿಗೆ ತಂದಿರುವುದು ನೋವಿನ ಸಂಗತಿ. ಬಂದ್ ಆಚರಿಸಿ ಜನಸಾಮಾನ್ಯರಿಗೆ ತೊಂದರೆ ಕೊಡುವುದು ಬೇಡ ಪ್ರತಿಭಟಿಸಿ ಮನವಿ ಸಲ್ಲಿಸೋಣ ಎಂದರು.

ಸಭೆಯಲ್ಲಿ ಯಾವುದೇ ಪಕ್ಷ ಅಥವಾ ಸಂಘಟನೆಗಳ ಶಾಲು ಅಥವಾ ಧ್ವಜಗಳನ್ನು ಬಳಸುವಂತಿಲ್ಲ ರೈತ ಪರ ಹೋರಾಟವಾಗಿರುವುದರಿಂದ ಹಸಿರು ಶಾಲು ಬಳಸಬಹುದು ಎಂದು ತೀರ್ಮಾನಿಸಲಾಯಿತು. ಬೆಳಗ್ಗೆ 10.30ಕ್ಕೆ ನಗರದ ಪ್ರವಾಸಿ ಮಂದಿರ ಮುಂಭಾಗದಿಂದ ಐಬಿ ರಸ್ತೆಯ ಮೂಲಕ ಕಾರ್ಯಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಬಳಿಕ ರಥಬೀದಿಯಾಗಿ ತಹಶೀಲ್ದಾರ್ ಕಚೇರಿ ತಲುಪಿ  ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ಈ ಸಂದರ್ಭ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ರಾಜು, ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ಕರ್ನಾಟಕ ಕಾವಲು ಪಡೆಯ ಜಿಲ್ಲಾಧ್ಯಕ್ಷ ಕೃಷ್ಣ, ವಿವಿಧ ಪಕ್ಷ ಮತ್ತು ಸಂಘಟನೆಗಳ  ಪ್ರಮಖರಾದ ಕಿರಣ್, ಭೀಮಯ್ಯ, ಭಾಷಾ, ಅಕ್ಮಲ್ ಸೇರಿದಂತೆ ಹಲವು ಮಂದಿ ಹಾಜರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು