ಕುಶಾಲನಗರ: ಸೋಮವಾರ ಬಂದ್ ಬದಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಕೊಡಗು ಜನಾಂದೋಲನ ಪ್ರಮುಖ ವಿ.ಪಿ.ಶಶಿಧರ್ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕೊರೊನದಿಂದಾಗಿ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ ಈ ನಡುವೆ ಬಂದ್ ಮಾಡಿಸಿ ನಮ್ಮವರಿಗೆ ನಾವೇ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ ರೈತರಿಗೆ ನ್ಯಾಯ ಕೊಡಿಸುವುದು ನಮ್ಮ ಸದುದ್ದೇಶವಾಗಬೇಕು ಎಂದರು.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಐತಿಹಾಸಿಕವಾದುದು. ಸಂವೇದನಾ ಇಲ್ಲದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ರೈತರನ್ನು ಭಿಕ್ಷುಕನಾಗಿಸುವ ಪರಿಸ್ಥಿತಿ ಎದುರಾಗಲಿದೆ. ಈ ಕೆಟ್ಟ ಧೋರಣೆಯನ್ನು ಖಂಡಿಸಿ ಹೋರಾಡಬೇಕಿದೆ ಎಂದರು.
ಈ ಸಂದರ್ಭ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ರಮೇಶ್ ಮಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧ ನೀತಿ ಕೃಷಿ ಮಾರುಕಟ್ಟೆ ನೀತಿ ತಿದ್ದುಪಡಿ ಮಾಡುವುದರ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆಯ ಸಂಪೂರ್ಣ ಅಧಿಕಾರವನ್ನು ಮೊಟಕು ಗೊಳಿಸಲಾಗುತ್ತಿದೆ ಇಂತಹ ಕೆಟ್ಟ ನೀತಿಯನ್ನು ರದ್ದು ಪಡಿಸಬೇಕು ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಇದೇ ಸಂದರ್ಭ ಹಸಿರು ಸೇನೆಯ ಕುಶಾಲನಗರ ತಾಲೂಕು ಅಧ್ಯಕ್ಷ ಜವರಪ್ಪ ಮಾತನಾಡಿ ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿಯಿಂದ ರೈತರು ಜೀವನ ನಡೆಸುವುದೇ ಮುಂದಿನ ದಿನಗಳಲ್ಲಿ ಕಷ್ಟಕರ ವಾಗಲಿದೆ. ರೈತರು ಬೆಳೆದ ಬೆಳೆಗಳಿಂದ ಜೀವನ ನಡೆಸುವ ಮೋದಿ ರೈತರ ವಿರೋಧ ನೀತಿ ಜಾರಿಗೆ ತಂದಿರುವುದು ನೋವಿನ ಸಂಗತಿ. ಬಂದ್ ಆಚರಿಸಿ ಜನಸಾಮಾನ್ಯರಿಗೆ ತೊಂದರೆ ಕೊಡುವುದು ಬೇಡ ಪ್ರತಿಭಟಿಸಿ ಮನವಿ ಸಲ್ಲಿಸೋಣ ಎಂದರು.
ಸಭೆಯಲ್ಲಿ ಯಾವುದೇ ಪಕ್ಷ ಅಥವಾ ಸಂಘಟನೆಗಳ ಶಾಲು ಅಥವಾ ಧ್ವಜಗಳನ್ನು ಬಳಸುವಂತಿಲ್ಲ ರೈತ ಪರ ಹೋರಾಟವಾಗಿರುವುದರಿಂದ ಹಸಿರು ಶಾಲು ಬಳಸಬಹುದು ಎಂದು ತೀರ್ಮಾನಿಸಲಾಯಿತು. ಬೆಳಗ್ಗೆ 10.30ಕ್ಕೆ ನಗರದ ಪ್ರವಾಸಿ ಮಂದಿರ ಮುಂಭಾಗದಿಂದ ಐಬಿ ರಸ್ತೆಯ ಮೂಲಕ ಕಾರ್ಯಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಬಳಿಕ ರಥಬೀದಿಯಾಗಿ ತಹಶೀಲ್ದಾರ್ ಕಚೇರಿ ತಲುಪಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.
ಈ ಸಂದರ್ಭ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ರಾಜು, ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ಕರ್ನಾಟಕ ಕಾವಲು ಪಡೆಯ ಜಿಲ್ಲಾಧ್ಯಕ್ಷ ಕೃಷ್ಣ, ವಿವಿಧ ಪಕ್ಷ ಮತ್ತು ಸಂಘಟನೆಗಳ ಪ್ರಮಖರಾದ ಕಿರಣ್, ಭೀಮಯ್ಯ, ಭಾಷಾ, ಅಕ್ಮಲ್ ಸೇರಿದಂತೆ ಹಲವು ಮಂದಿ ಹಾಜರಿದ್ದರು.
ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…
ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…
ಸಿಲಿಕಾನ್ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…
ಟಾಲಿವುಡ್ ನಟ ಅಲ್ಲು ಅರ್ಜುನ್ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…