ಕುಶಾಲನಗರ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಕುಶಾಲನಗರದ ರಾಧಾಕೃಷ್ಣ ಬಡಾವಣೆಯಲ್ಲಿ ನಡೆದಿದೆ.
ಸಮಿಯುಲ್ಲಾ ಖಾನ್(40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರ. ತನ್ನ ಹೆಂಡತಿ ಸುಹಾನಾರವರು ಕರ್ತವ್ಯ ಮುಗಿಸಿ ಮನೆಗೆ ಬಂದ ಸಮಯದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಮೃತರು ಕುಶಾಲನಗರದ ಅನುರಾಧಾ ಮೊಬೈಲ್ ಮಳಿಗೆ ಮಾಲೀಕರಾಗಿದ್ದು, ಜೊತೆಗೆ ಆವರ್ತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರು.
ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಣ ಪ್ರಮಾಣ ಪತ್ರದಲ್ಲಿ ವ್ಯಕ್ತಿಯೋರ್ವ ತನಗೆ ಹಣ ನೀಡದೇ ಇರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಇವರು ತನ್ನ ಹೆಂಡತಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ.
ಸ್ಥಳಕ್ಕೆ ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕ್ಕೊಂಡಿರುವ ಪೊಲೀಸ್ಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.