News Karnataka Kannada
Thursday, May 09 2024
ಮಡಿಕೇರಿ

ಕೊಡಗಿನಲ್ಲಿ ಕಾಡುತ್ತಿದೆ ನಿಗೂಢ ಕಾಯಿಲೆ ಈ ಹೊಸ ರೋಗದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ಇಲ್ಲ

coivd 19
Photo Credit :

ಮಡಿಕೇರಿ: ಕೋವಿಡ್ ನೆಗೆಟಿವ್, ಡೆಂಗೆ ನೆಗೆಟಿವ್, ಚಿಕೂನ್ ಗುನ್ಯಾ ನೆಗೆಟಿವ್…ಆದರೆ ಈ ಕಾಯಿಲೆಗಳ ಸಾಮಾನ್ಯ ಲಕ್ಷಣಗಳು ಇರುವ ಹೊಸದೊಂದು ರೋಗ ಜಿಲ್ಲೆಯ ಹಲವೆಡೆ ಮಕ್ಕಳ ಜೀವ ಹಿಂಡುತ್ತಿದೆ. ಕುಶಾಲನಗರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಬಗೆಯ ಲಕ್ಷಣಗಳಿರುವ ರೋಗಿಗಳು ಕಂಡು ಬರುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈಚೆಗೆ ಇಲ್ಲಿನ ಸುಮಾರು 30 ಮಂದಿ ಮಕ್ಕಳು ಮೈಸೂರಿನ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವ ಮಾಹಿತಿ ಇದೆ. ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಇತರ ಕಡೆಗಳಿಗೂ ಹೋಗಿರುವ ಸಾಧ್ಯತೆಯಿದೆ.

ವಿಪರೀತ ಜ್ವರ, ಮೈಯೆಲ್ಲ ಕಜ್ಜಿ, ತುರಿಕೆ, ಆಗಾಗ್ಗೆ ವಾಂತಿ…ಇಂತಹ ಲಕ್ಷಣಗಳಿರುವ ಕಾಯಿಲೆಯೊಂದು ಕೊಡಗಿನ ಹಲವೆಡೆ ಕಾಣಿಸಿಕೊಂಡಿದೆ. ಅದರಲ್ಲೂ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಇದು ಇನ್ನು ಕೂಡ ಆರೋಗ್ಯ ಇಲಾಖೆ ಗಮನಕ್ಕೆ ಬಾರದಿರುವುದು ಆಶ್ಚರ್ಯವಾಗಿದೆ.

ಈ ಕಾಯಿಲೆಯೂ ಸೊಳ್ಳೆಗಳಿಂದ ಹರಡುತ್ತಿದೆ ಎನ್ನುವ ಮಾಹಿತಿಯನ್ನು ವೈದ್ಯರು ಕೊಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಸೊಳ್ಳೆಗಳು ಹೆಚ್ಚು ಇರುವ ಪ್ರದೇಶಗಳಿಂದಲೇ ಜಾಸ್ತಿ ಪ್ರಕರಣಗಳು ವರದಿಯಾಗುತ್ತಿದೆ. ಒಂದು ವಾರಕ್ಕೂ ಹೆಚ್ಚು ಕಾಲ ಜ್ವರ, ಕಜ್ಜಿ, ತುರಿಕೆಯಿಂದ ಕಾಡುವ ಈ ರೋಗ ಸ್ವಲ್ಪ ಹೆಚ್ಚಾದಾಗ ವಾಂತಿಯೂ ಶುರುವಾಗುತ್ತದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ಪ್ರಾಣಾಪಾಯವೂ ಸಂಭವಿಸಬಹುದು ಎನ್ನುತ್ತಾರೆ ವೈದ್ಯರು.

ರೋಗ ಲಕ್ಷಣಗಳು ಗುಣವಾದ ನಂತರ ದೇಹದ ಸಂದುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತಿರುವುದು ಮಕ್ಕಳ ಪೋಷಕರಲ್ಲಿ ಆತಂಕ ಹುಟ್ಟಿಸಿದೆ. ಇದೀಗ ಶಾಲೆಗಳು ಕೂಡ ಆರಂಭವಾಗಿರುವುದರಿಂದ ರೋಗ ಪೀಡಿತ ಮಕ್ಕಳು ಪಾಠಗಳಿಂದಲೂ ವಂಚಿತರಾಗುತ್ತಿದ್ದಾರೆ. ಸೊಳ್ಳೆಗಳ ನಿರ್ಮೂಲನೆಗೆ ಗಮನಹರಿಸಿ ರೋಗ ಮತ್ತಷ್ಟು ಹರಡದಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು