ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪಾಸಿಟಿವ್ ದರ ಹಳೇ ಮಾರ್ಗಸೂಚಿಯನ್ನು ಮಾರ್ಪಡಿಸಿ ಪ್ರತಿದಿನ ಬೆಳಗ್ಗೆ 5 ರಿಂದ ರಾತ್ರಿ 9 ರವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸೋಂಕು ಹೆಚ್ಚಿರುವ ಕೇರಳ ರಾಜ್ಯ ಪ್ರಯಾಣವನ್ನು ಸಾರ್ವಜನಿಕರು ಮುಂದೂಡುವಂತೆ ಮನವಿ ಮಾಡಿರುವ ಜಿಲ್ಲಾಡಳಿತ, ಕೋವಿಡ್ ವಿರುದ್ಧ ಜಾಗೃತಿ ವಹಿಸುವಂತೆ ಸೂಚಿಸಿದೆ.
ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಶೇ.2ಕ್ಕಿಂತ ಕಡಿಮೆಯಾದ ಹಿನ್ನೆಲೆ ರಾಜ್ಯದ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಸಂಬಂಧ ಸರ್ಕಾರದ ಹೊರಡಿಸಿರುವ ಆದೇಶಗಳನ್ನು ಆಧರಿಸಿ, ಕೊಡಗು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಹಿಂದೆ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ಸೆ.9ರಿಂದ ಅನ್ವಯವಾಗುವಂತೆ ಮುಂದಿನ ಆದೇಶವರೆಗೆ ಜಾರಿಯಲ್ಲಿರುವಂತೆ ಕರ್ಫ್ಯೂ ತೆರವುಗೊಳಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭ ಕಂಟೈನ್ಮೆಂಟ್ ವಲಯಗಳಲ್ಲಿ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ವಾರದ ಎಲ್ಲ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಎಲ್ಲ ತರಹದ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ
ಜಿಲ್ಲೆಯ ಗಡಿಭಾಗಗಳಲ್ಲಿ ಮತ್ತು ಚೆಕೆಎಪೋಸ್ಟ್ಗಳಲ್ಲಿ ನಡೆಸುತ್ತಿರುವ ಸರ್ವೇಕ್ಷಣಾ ಕ್ರಮಗಳು/ನಿರ್ಬಂಧಗಳು ಯಥಾವತ್ತಾಗಿ ಮುಂದುವರೆಯುತ್ತದೆ. ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆಗಳಾದ ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕ್ರಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲ್ಲ ಶಿಕ್ಷಣ ಸಂಸ್ಥೆಗಳು / ನರ್ಸಿಂಗ್ / ಪ್ಯಾರಾ ಮೆಡಿಕಲ್ ಸಂಸ್ಥೆಗಳ ಆಡಳಿತಾಧಿಕಾರಿಗಳು / ಪ್ರಾಂಶುಪಾಲರು ಕರ್ನಾಟಕಕ್ಕೆ ಇದುವರೆಗೂ ಹಿಂದಿರುಗದ ತಮ್ಮ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವಂತೆ ಸೂಚಿಸಬೇಕು. ತಮ್ಮ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಅಕ್ಟೋಬರ್ ಅಂತ್ಯದವರೆಗೆ ಕೇರಳಕ್ಕೆ ಪ್ರಯಾಣವನ್ನು ಮಾಡದಿರುವಂತೆ ಸೂಚಿಸಬೇಕು. ಎಲ್ಲ ಆಸ್ಪತ್ರೆಗಳು / ನರ್ಸಿಂಗ್ ಹೋಂಗಳು / ಕಚೇರಿಗಳು / ಹೋಟೆಲ್ಗಳು, ಕಾರ್ಖಾನೆಗಳು ಹಾಗೂ ಇತರ ಉದ್ಯಮಗಳ ಆಡಳಿತಾಧಿಕಾರಿಗಳು / ಮಾಲೀಕರು ಕರ್ನಾಟಕಕ್ಕೆ ಇದುವರೆಗೂ ಹಿಂದಿರುಗದ ತಮ್ಮ ಉದ್ಯೋಗಿಗಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವಂತೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.