News Karnataka Kannada
Thursday, May 02 2024
ಮಡಿಕೇರಿ

ಕೊಡಗಿನಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಿಸಿದ ಜಿಲ್ಲಾಧಿಕಾರಿ

Ita Covid19 Mng 06082021
Photo Credit :

ಮಡಿಕೇರಿ ; ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿದ್ದು, ಕೋವಿಡ್-19 ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9.00 ಗಂಟೆಯಿಂದ ಸೋಮವಾರ ಬೆಳಗ್ಗೆ 5.00 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಈಗಾಗಲೇ ಜಾರಿಗೊಳಿಸಲಾಗಿರುತ್ತದೆ. ಸದರಿ ಆದೇಶವು ದಿನಾಂಕ 16.08.2021ರ ಬೆಳಗ್ಗೆ 6.00ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ ಎಂದು ಪುನರ್ ಉಚ್ಚರಿಸಿದೆ.
*ಈ ಅವಧಿಯಲ್ಲಿ ಈ ಕೆಳಕಂಡ ತುರ್ತು / ಅತ್ಯವಶ್ಯಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ*
1. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು, ಕಾರ್ಪೋರೇಷನ್ ಇತ್ಯಾದಿಗಳು, ತುರ್ತು ಮತ್ತು ಅತ್ಯವಶ್ಯಕ ಸೇವೆಗಳು ಹಾಗೂ ಕೋವಿಡ್ 19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಇಲಾಖೆ / ಕಚೇರಿಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಅಡ್ಡಿ ಇರುವುದಿಲ್ಲ.
2. ತುರ್ತು ಮತ್ತು ಅತ್ಯವಶ್ಯಕ ಸೇವೆಗಳನ್ನು ನೀಡುವ ಎಲ್ಲಾ ಕೈಗಾರಿಕೆ / ಕಂಪೆನಿಗಳು / ಸಂಸ್ಥೆ ಗಳ ಕಾರ್ಯಾಚರಣೆ ಹಾಗೂ ಅದರ ಸಿಬ್ಬಂದಿಗಳ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ಆದಾಗ್ಯೂ ಅವರುಗಳು ಸಂಸ್ಥೆ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿರತಕ್ಕದ್ದು.
3. ವೈದ್ಯಕೀಯ ಸೇವೆಯ ಸಂಬಂಧ ರೋಗಿಯೊಂದಿಗೆ ರೋಗಿಯ ಉಪಚಾರಕರ ಓಡಾಟಕ್ಕೆ ಅಡ್ಡಿ ಇರುವುದಿಲ್ಲ.
4. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುತ್ತಾ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್ ಗಳು, ಪಶು ಆಹಾರ ಮಳಿಗೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಪಡಿತರ ನ್ಯಾಯ ಬೆಲೆ ಮಳಿಗೆ, ಸ್ಟಾಂಡ್ ಅಲೋನ್ ಮದ್ಯ ಮಾರಾಟ ಮಳಿಗೆ ( ಟೇಕ್ ಅವೇ ರೂಪದಲ್ಲಿ) ಬೆಳಗ್ಗೆ 5:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ. ಹೋಂ ಡೆಲಿವರಿ ಪದ್ದತಿಗೆ ಉತ್ತೇಜನ ನೀಡುವುದು.
5. ರೆಸ್ಟೋರೆಂಟ್ ಮತ್ತು ಉಪಾಹಾರ ಮಳಿಗೆಗಳಿಂದ ಟೇಕ್ ಅವೇ ರೂಪದಲ್ಲಿ ಪಡೆಯಲು ಹಾಗೂ ಹೋಂ ಡೆಲಿವರಿಗೆ ಅವಕಾಶ ಇರುತ್ತದೆ.
6. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ/ಸ್ಟಾಪ್/ಸ್ಟಾಂಡ್ ಗಳಿಂದ ಪ್ರಯಾಣಿಕರನ್ನು ಕರೆತರಲು / ಕರೆದೊಯ್ಯಲು ಸಾರ್ವಜನಿಕ ಸಾರಿಗೆ, ಖಾಸಗಿ ಸಾರಿಗೆ ಮತ್ತು ಟ್ಯಾಕ್ಸಿಗಳಿಗೆ ಅನುಮತಿಸಿದೆ. ಆದಾಗ್ಯೂ ಪ್ರಯಾಣಿಕರು ಅಧಿಕೃತ ಟಿಕೆಟ್ ನ್ನು ಹೊಂದಿರ ತಕ್ಕದ್ದು ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸತಕ್ಕದ್ದು.
ಜಿಲ್ಲೆಯ ಸಾರ್ವಜನಿಕರು ಕೋವಿಡ್-19 ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಈ ಕಛೇರಿಯಿಂದ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುತ್ತಾ ಸಹಕರಿಸಲು ಕೋರಿದೆ.ಆದೇಶ ಉಲ್ಲಂಘಿಸುವ ಯಾವುದೇ ವ್ಯಕ್ತಿಗಳು ವಿಪತ್ತು ನಿರ್ವಹಣಾ ಕಾಯ್ದೆ ಕಲಂ 51 ರಿಂದ 60ರ ಉಪಬಂಧಗಳು ಮತ್ತು ಭಾರತೀಯ ದಂಡಸಂಹಿತೆ ಕಲಂ 188 ಹಾಗೂ ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್-2020ರ ಕಲಂ 9ರ ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ದಂಡನೆಗೆ ಒಳಗಾಗುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು