News Karnataka Kannada
Friday, May 10 2024
ಮಡಿಕೇರಿ

ಕೊಡಗಿನ ಎರಡು ಹೊಸ ತಾಲೂಕುಗಳಲ್ಲಿ ಹುದ್ದೆಗಳು ಖಾಲಿ ಖಾಲಿ

New Project (2)
Photo Credit :

ಮಡಿಕೇರಿ : ಜಿಲ್ಲೆಗೆ ಎರಡು ಹೊಸ ತಾಲೂಕುಗಳನ್ನು ಸರಕಾರ ಘೋಷಣೆ ಮಾಡಿದ್ದರೂ, ತಹಶೀಲ್ದಾರರ ಹುದ್ದೆಯೂ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವಲ್ಲಿ ವಿಫಲವಾಗಿದೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಈ ಕುರಿತು ಪ್ರಸ್ತಾಪಿಸಿದ್ದು, ಖಾಲಿ ಹುದ್ದೆಗಳನ್ನು ಕಾಲಕಾಲಕ್ಕೆ ನಡೆಯುವ ನೇಮಕಾತಿ, ಮುಂಬಡ್ತಿ ಹಾಗೂ ವರ್ಗಾವಣೆ ಸಂದರ್ಭದಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ.

ಹೊಸದಾಗಿ ರಚನೆಯಾಗಿರುವ ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲೂಕಿಗೆ ತಲಾ ಒಬ್ಬರು ಗ್ರೇಡ್ 1 ತಹಶಿಲ್ದಾರರು, ಶಿರಸ್ತೇದಾರ, ಆಹಾರ ನಿರೀಕ್ಷಕ, ಬೆರಳಚ್ಚುಗಾರ, ವಾಹನ ಚಾಲಕ, ತಲಾ ಇಬ್ಬರು ಪ್ರಥಮ ದರ್ಜೆ ಸಹಾಯಕರು ಮತ್ತು ಗ್ರೂಪ್ ಡಿ ನೌಕರರು, ಮೂವರು ದ್ವಿತೀಯ ದರ್ಜೆ/ಸಹಾಯಕರ ಹುದ್ದೆಗಳನ್ನು ಮಂಜೂರು ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಪೈಕಿ ಬೆರಳಚ್ಚುಗಾರ, ಚಾಲಕ ಹಾಗೂ ಗ್ರೂಪ್ ಡಿ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವಂತೆಯೂ ಸೂಚಿಸಿತ್ತು.

ಆದರೆ ಈ ಪೈಕಿ ಪೊನ್ನಂಪೇಟೆ ತಾಲೂಕಿಗೆ ಒಬ್ಬರು ಶಿರಸ್ತೇದಾರ, ಕುಶಾಲನಗರ ತಾಲೂಕಿಗೆ ಒಬ್ಬರು ತಹಶೀಲ್ದಾರರು, ಶಿರಸ್ತೇದಾರ ಹಾಗೂ ಪ್ರಥಮ ದರ್ಜೆ ನೌಕರರನ್ನು ಮಾತ್ರ ಸರಕಾರ ನೇಮಿಸಿದೆ. ಉಳಿದಂತೆ ಪೊನ್ನಂಪೇಟೆ ತಾಲೂಕಿಗೆ ವೀರಾಜಪೇಟೆ ತಾಲೂಕು ತಹಶೀಲ್ದಾರರನ್ನು ಪ್ರಭಾರ ಹುದ್ದೆಯಲ್ಲಿಡಲಾಗಿದ್ದು, ಅವರದ್ದೇ ಕಚೇರಿಯ ತಲಾ ಒಬ್ಬರು ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರನ್ನು ಹಾಗೂ ಕುಶಾಲನಗರ ತಾಲೂಕು ಕಚೇರಿಗೆ ಸೋಮವಾರಪೇಟೆ ತಾಲೂಕು ಕಚೇರಿಯಿಂದ ತಲಾ ಒಬ್ಬರು ಪ್ರಥಮ ಮತ್ತು ದ್ವಿತೀಯ ದರ್ಜೆ ನೌಕರರನ್ನು ನಿಯೋಜಿಸಿದೆ.

ಉಳಿದಂತೆ ಹೊರಗುತ್ತಿಗೆ ಆಧಾರದ ಹುದ್ದೆಗಳನ್ನು ಅನುದಾನದ ಲಭ್ಯತೆಯನ್ನು ಆಧರಿಸಿ ಭರ್ತಿ ಮಾಡಿಕೊಳ್ಳುವುದಾಗಿಯೂ ತಿಳಿಸಿದೆ. ಸರಕಾರದ ಈ ನಿರ್ಧಾರದಿಂದಾಗಿ ನೂತನ ತಾಲೂಕು ರಚನೆಯಾಗಿದ್ದರೂ, ಆದರ ಪೂರ್ಣಪ್ರಮಾಣದ ಪ್ರಯೋಜನ ಸಾರ್ವಜನಿಕರಿಗೆ ಲಭಿಸದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು