News Karnataka Kannada
Friday, May 03 2024
ಮಡಿಕೇರಿ

ಕೊಡಗು ಮೂಲದ ಸಮಾಜ ಸೇವಕನಿಗೆ ಪ್ರತಿಷ್ಟಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

Dada Saheb 13 7 21
Photo Credit :

ಮಡಿಕೇರಿ  : ಕೊಡಗಿನ‌ ಸುಂಟಿಕೊಪ್ಪ ಸಮೀಪದ  ಕಲ್ಲೂರು ಗ್ರಾಮದ ಪ್ರಶಾಂತ್ ಕಲ್ಲೂರು ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ‌ ಮುಡಿಗೇರಿಸಿಕೊಂಡು ಕೊಡಗಿನ ಹಿರಿಮೆ ಹೆಚ್ಚಿಸಿದ್ದಾರೆ.ಪ್ರಶಾಂತ್ ಅವರ  ಸಾಮಾಜಿಕ ಸೇವೆ ಪರಿಗಣಿಸಿ ಈ‌ ಪ್ರಶಸ್ತಿ ನೀಡಲಾಗಿದೆ. ವೀರಶೈವ ಲಿಂಗಾಯತ ಯುವ ವೇದಿಕೆಯ ರಾಜ್ಯಾಧ್ಯಕ್ಷರಾಗಿರುವ ಪ್ರಶಾಂತ್ ತಮ್ಮ ಕಲ್ಲೂರ್ ಸಿನಿಮಾಸ್ ಮೂಲಕ ಚಿತ್ರರಂಗಕ್ಕೂ ಕಾಲಿರಿಸಿದ್ದಾರೆ.

ತಮ್ಮದೇ ಆದ ಸಾಫ್ಟ್ವೇರ್ ಕಂಪೆನಿಯೊಂದಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಪ್ರಶಾಂತ್ ಬಸವಜ್ಯೋತಿ ಎಂಬ ಮಾಸಿಕ ಪತ್ರಿಕೆಯ ಸಂಪಾದಕರೂ ಆಗಿದ್ದಾರೆ.ವೀರಶೈವ ಲಿಂಗಾಯತ ಯುವ ವೇದಿಕೆ ಮೂಲಕ ಹಲವು ವರ್ಷಗಳಿಂದ ಸಾಮಾಜಿಕ  ಕಾಳಜಿಯ ಕೆಲಸ ಮಾಡುತಿದ್ದಾರೆ.  ಇವರ ಸಮಾಜ ಸೇವೆಯನ್ನು ಗುರುತಿಸಿ  ಪಾಲ್ಕೆ ಕುಟುಂಬಸ್ಥರು ಕೊಡಮಾಡುವ ಪ್ರತಿಷ್ಠಿತ “ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ 2021″ನ್ನು  ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪಾಲ್ಕೆ ಅವರ ಮೊಮ್ಮಗ ಚಂದ್ರಶೇಖರ್ ಪಾಲ್ಕೆ ಹಾಗೂ ಚಿತ್ರನಟ ಸುಮನ್ ತಲ್ವಾರ್ ರವರಿಂದ ವೇದಿಕೆಯ ರಾಜ್ಯಾಧ್ಯಕ್ಷರಾದ  ಪ್ರಶಾಂತ್ ಕಲ್ಲೂರ್  ಪ್ರಶಸ್ತಿ ಸ್ವೀಕರಿಸಿದರು.

ಸಮಾಜ ಸೇವೆಯ ಮೂಲಕ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆದು ಕೊಡಗಿನ ಹಿರಿಮೆ ಹೆಚ್ಚಿಸಿಸುವ ಪ್ರಶಾಂತ್ ಕಲ್ಲೂರ್ ಸಾಧನೆಗೆ  ನೂರಾರು ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು