ಮಡಿಕೇರಿ : ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸ ಪರಿಷ್ಕರಣೆ ಬಗ್ಗೆ ಮುಂದಿನ ವರ್ಷ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಪಠ್ಯ ಪರಿಷ್ಕರಣೆ ಬಗ್ಗೆ ಮುಂದಿನ ವರ್ಷ ನಿರ್ಧಾರ ಕೈಗೊಳ್ಳಲಾಗುವುದು.
ಬ್ರಿಟಿಷ್ ಗ್ರಂಥಾಲಯದಿಂದ ಮಾಹಿತಿ ಸಂಗ್ರಹಿಸಿದ್ದಾರೆ ಇವುಗಳನ್ನು ಅಧ್ಯಯನ ಮಾಡಿ ಮುಂದಿನ ವರ್ಷ ಟಿಪ್ಪು ಪಠ್ಯ ಪರಿಷ್ಕರಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಶಾಸಕ ಅಪ್ಪಚ್ಚು ರಂಜನ್ ಟಿಪ್ಪು ಸುಲ್ತಾನ್ ಇತಿಹಾಸದ ಕುರಿತಂತೆ ಹಲವು ಸಾಕ್ಷ್ಯಗಳನ್ನು ಒದಗಿಸಿದ್ದಾರೆ.