ಮಡಿಕೇರಿ : ಮಡಿಕೇರಿ ನಗರಸಭೆ ಸಾರ್ವಜನಿಕರ ಪಾಲಿನ ಕಪ್ಪ ಸಲ್ಲಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರಸಭೆಯಲ್ಲಿ ಫಾರಂ-3, ಪರವಾನಗಿ ನವೀಕರಣ ಸೇರಿದಂತೆ ವಿವಿಧ ಬಗೆಯ ಕಡತಗಳ ವಿಲೇವಾರಿಗೆ ಇಂತಿಷ್ಟು ಹಣ ನೀಡಲೇಬೇಕಾಗಿದೆ ಎಂದು ದೂರಿಕೊಂಡಿದ್ದಾರೆ.
ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದ ಅವರು, ಪ್ರಭಾವಿಗಳ ಮೂಗಿನ ನೇರಕ್ಕೆ ಇದೆಲ್ಲವೂ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೌರಾಯುಕ್ತರಿಗೆ ನಗರಸಭಾ ನಿಯಮಗಳ ಬಗ್ಗೆ ಅರಿವಿನ ಕೊರತೆ ಇದೆ ಎಂದು ಟೀಕಿಸಿದರು.
ಕಾವೇರಿ ಮಹಲ್ ಕಾಮಗಾರಿ ಪ್ರಕರಣದಲ್ಲಿ 5 ಲಕ್ಷ ರೂ. ಬೇಡಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಅವರು, ನಗರಸಭೆಯ ಬಿಜೆಪಿ ಸದಸ್ಯರು ಈ ವಿಚಾರದಲ್ಲಿ ನಡೆದುಕೊಂಡ ರೀತಿ ಸರಿ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಸಲ್ಮಾನರು ಹಾಗೂ ಪರಿಶಿಷ್ಟರ ಬಗ್ಗೆ ಬಿಜೆಪಿಗೆ ಎಷ್ಟು ಗೌರವವಿದೆ ಎನ್ನುವುದನ್ನು ಆ ಪಕ್ಷದ ಸದಸ್ಯರೇ ಹೇಳಿರುವ ಆಡಿಯೋ ವೈರಲ್ ಆಗಿದ್ದು, ಸತ್ಯ ಬಹಿರಂಗವಾಗಿದೆ ಎಂದು ಮೈನಾ ಆರೋಪಿಸಿದರು.
ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ ಮಾತನಾಡಿ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಶೀಘ್ರ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.
ಶಾಸಕರುಗಳಿಗೆ ನಗರದ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲವೆಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಸೇವಾದಳದ ಜಿಲ್ಲಾ ಉಪಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಹಾಗೂ ಪ್ರಮುಖ ರವಿಗೌಡ ಉಪಸ್ಥಿತರಿದ್ದರು.
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…