ಸೋಮವಾರಪೇಟೆ,ನ. 2 : ಇಂದು ತನ್ನ ನಿಸ್ವಾರ್ಥ ಸೇವೆಯಿಂದಾಗಿಯೇ ಜೇಸೀ ಸಂಸ್ಥೆ ವಿಶ್ವಾದ್ಯಂತ ಹೆಸರುವಾಸಿಯಾಗಿದೆ ಎಂದು ಕೊಡುಗೈ ದಾನಿ ಹರಪಳ್ಳಿ ರವೀಂದ್ರ ಅವರು ಹೇಳಿದರು. ಭಾನುವಾರ ಇಲ್ಲಿನ ನಂಜಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಜೇಸೀ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಜೇಸಿ ಸದಸ್ಯರು 135 ದೇಶಗಳಲ್ಲಿ ಸೇವೆ ಸಲ್ಲಿಸುತಿದ್ದು ಇವರು ಯಾರಿಗೂ ವ್ಯವಹಾರಿಕ ಮನಸ್ಥಿತಿ ಇಲ್ಲ ಬದಲಿಗೆ ಪರಸೇವೆಯೇ ಪರಮೋಧರ್ಮ ಎಂದು ಭಾವಿಸಿದ್ದಾರೆ ಎಂದರು.
ಈ ಸಂಸ್ಥೆಯಲ್ಲಿ 18 ರಿಂದ 40 ರ ವಯೋಮಾನದ ಎಲ್ಲರೂ ಭಾಗಿಗಳಾಗಲು ಅವಕಾಶ ಇದ್ದು ದೇಶ ಸೇವೆ, ಸಮಾಜ ಸೇವೆ ಮಾಡುವ ಮುಕ್ತ ಅವಕಾಶದ ಜತೆಗೇ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಇದು ವೇದಿಕೆ ಆಗಿದೆ ಎಂದು ಅವರು ಹೇಳಿದರು. ಇಂದು ದೇಶ ನಿರ್ಮಾಣದಲ್ಲಿ ಯುವ ಜನಾಂಗದ ಪಾತ್ರವನ್ನು ಯಾರೂ ಮರೆಯುವಂತಿಲ್ಲ , ಅದರಲ್ಲೂ ಇಡೀ ದೇಶವೇ ಕೊರೋನದಿಂದ ಕಂಗೆಟ್ಟಿದ್ದಾಗ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಅಪರಿಮಿತವಾದುದು ಎಂದು ಅವರು ಹೇಳಿದರು.
ನಾವು ಎಷ್ಟು ವರ್ಷ ಬದುಕುತ್ತೇವೆ ಎಂಬುದು ಮುಖ್ಯವೇ ಅಲ್ಲ ಬದಲಿಗೆ ನಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸುತ್ತಾ ಹೋದಾಗ ಮಾತ್ರ ಜೀವನದ ಸಾರ್ಥಕತೆ ಆಗುತ್ತದೆ ಎಂದು ಹೇಳಿದರು. ಜೇಸೀ ಮಾಜಿ ಅದ್ಯಕ್ಷೆ ಉಷಾರಾಣಿ ಅವರು ಮಾತನಾಡಿ ಜೇಸೀ ಸಂಸ್ಥೆಯ ಸದಸ್ಯರ ಸೇವೆಯನ್ನು ಶ್ಲಾಘಿಸಿದರು. ಜೇಸೀ ಅದ್ಯಕ್ಷಿಣಿ ಮಾಯಾ ಗಿರೀಶ ಅದ್ಯಕ್ಷತೆ ವಹಿಸಿದ್ದರು.
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…