News Karnataka Kannada
Thursday, May 09 2024
ಮಡಿಕೇರಿ

ಪತ್ರಕರ್ತರು, ಕುಟುಂಬಸ್ಥರ ಕಣ್ಣಿನ ತಪಾಸಣೆ

Madikeri
Photo Credit :

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಇಕ್ಷಾ ಕಣ್ಣಿನ ಆಸ್ಪತ್ರೆಯಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರಿಗೆ ಆಯೋಜಿಸಿರುವ ಕಣ್ಣಿನ ತಪಾಸಣಾ ಉಚಿತ ಶಿಬಿರಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಇಕ್ಷಾ ಕಣ್ಣಿನ ಆಸ್ಪತ್ರೆ ಮುಖ್ಯಸ್ಥರಾದ ಡಾ.ಅಜ್ಜಿನಿಕಂಡ ಧ್ಯಾನ್ ಚಿಣ್ಣಪ್ಪ ನೇತೃತ್ವದಲ್ಲಿ ಕಣ್ಣಿನ ತಪಾಸಣೆ ಮಾಡಲಾಯಿತು. ಪ್ರಥಮ ದಿನ 33 ಜನ ತಪಾಸಣೆ ಮಾಡಿಸಿಕೊಂಡರು.

ಮಂಗಳವಾರ, ಬುಧವಾರ ಕೂಡ ತಪಾಸಣೆ ಶಿಬಿರ ಮುಂದುವರಿಯಲಿದೆ. ಪ್ರತಿಯೊಬ್ಬರೂ ಕಣ್ಣಿನ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಾಗಿದೆ. ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹಾಗೂ ಅವರ ಕುಟುಂಬ ಸದಸ್ಯರಿಗೆ ಕಣ್ಣಿನ ತಪಾಸಣಾ ಶಿಬಿರ ನಮ್ಮ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಇಕ್ಷಾ ಕಣ್ಣಿನ ಆಸ್ಪತ್ರೆ ಮುಖ್ಯಸ್ಥರಾದ ಡಾ.ಅಜ್ಜಿನಿಕಂಡ ಧ್ಯಾನ್ ಚಿಣ್ಣಪ್ಪ ಹೇಳಿದರು.

ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗುತ್ತಿದೆ. ಈ ಮೊದಲು ಕಿವಿ ಪರೀಕ್ಷೆ ಮಾಡಿದ್ದು, ಇದೀಗ ಕಣ್ಣಿನ ತಪಾಸಣೆ ಮಾಡಲಾಗುತ್ತಿದೆ. ಡಾ.ಅಜ್ಜಿನಿಕಂಡ ಧ್ಯಾನ್ ಚಿಣ್ಣಪ್ಪ ಹೆಚ್ಚು ಮುತುವರ್ಜಿ ವಹಿಸಿ, ತಮ್ಮ ಆಸ್ಪತ್ರೆಯಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ ಮಾಡಿ ದ್ದಾರೆಂದು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹೇಳಿದ್ದಾರೆ.

ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಉಪಾಧ್ಯಕ್ಷ ಕೆ.ಎ. ಆದಿತ್ಯ, ನಿರ್ದೇಶಕ ನವೀನ್ ಸುವರ್ಣ, ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕರಾದ ಪ್ರಸಿನ್ ಗೌಡ, ಪೊನ್ನೇಟಿ ಸುನಿಲ್, ನವೀನ್ ಡಿಸೋಜ, ವಿಶ್ವ ಕುಂಬೂರು ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು