News Karnataka Kannada
Friday, May 03 2024
ಮಡಿಕೇರಿ

ಪಾನಮತ್ತ ವ್ಯಕ್ತಿಯಿಂದ ಗುಂಡಿನ ದಾಳಿ: ಇಬ್ಬರಿಗೆ ಗಾಯ

Madikeri: Boy killed in tiger attack at Palleri
Photo Credit :

ಕೊಡಗು: ಪಾನಮತ್ತ ವ್ಯಕ್ತಿಯೊಬ್ಬರು ಇಬ್ಬರ ಮೇಲೆ ಗುಂಡು ಹಾರಿಸಿರುವ ಪ್ರಕರಣ ವೀರಾಜಪೇಟೆ ಸಮೀಪದ ಬಾಳುಗೋಡು ಗ್ರಾಮದಲ್ಲಿ ನಡೆದಿದೆ.

ವೀರಾಜಪೇಟೆಯ ಪೆರುಂಬಾಡಿ ಸಮೀಪದ ಬಾಳುಗೋಡು ನಿವಾಸಿ ವಿನಯ್ ಅಯ್ಯಪ್ಪ ಎಂಬವರೇ ಗುಂಡು ಹಾರಿಸಿದ‌ವರಾಗಿದ್ದು, ಗ್ರಾಮದ ನಿವಾಸಿಗಳಾದ ಹರೀಶ್ ಹಾಗೂ ಬಾಲಕೃಷ್ಣ ಗಾಯಗೊಂಡವರಾಗಿದ್ದಾರೆ.

ವೀರಾಜಪೇಟೆ ಠಾಣಾಧಿಕಾರಿ ಜಗದೀಶ ಧೂಳಶೆಟ್ಟಿ ಅವರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಪಿಸ್ತೂಲು ವಶಪಡಿಸಿಕೊಂಡಿದ್ದಾರೆ.

ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ‌ ನಡುವೆ ಘಟನೆಯ ಬಗ್ಗೆ ಮಾಹಿತಿ ನೀಡಿರುವ ಗ್ರಾಮಸ್ಥರು, ಹರೀಶ ಹಾಗೂ ಬಾಲಕೃಷ್ಣ ಅವರುಗಳು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಿನಯ್ ಅವರು ತಮ್ಮ ಬಳಿ ಇದ್ದ ಪಿಸ್ತೂಲ್’ನಿಂದ ಗುಂಡು ಹಾರಿಸಿದ್ದಾರೆ.

ಗಾಯಾಳುಗಳ ವಿರುದ್ಧ ಈಗಾಗಲೇ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿದ್ದು,‌ಅವರಿಬ್ಬರ ವಿರುದ್ಧ ರೌಡಿಶೀಟ್ ತೆರೆಯಬೇಕೆಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು