ಕುಶಾಲನಗರ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ರೈತ ಮೋರ್ಚಾದ ವತಿಯಿಂದ ಸ್ವಚ್ಛತಾ ಶ್ರಮದಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು, ಜಿಲ್ಲಾ ಮಟ್ಟದ ನೂರಾರು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಕೂಡಿಗೆಯ ದಂಡಿನಮ್ಮ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಹಣ್ಣಿನ ಗಿಡಗಳನ್ನು ನೆಟ್ಟರು. ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯೆ ಯಮುನಾ ಚಂಗಪ್ಪ, ಸೋಮವಾರಪೇಟೆ ತಾಲೂಕು ಬಿಜೆಪಿ ರೈತ ಮೋರ್ಚಾ ಮಂಡಲ ಅಧ್ಯಕ್ಷ ಟಿ.ಎಸ್.ಜಗದೀಶ್, ಉಪಾಧ್ಯಕ್ಷ ಮಾಚಂಡ ಪ್ರಕಾಶ್, ಕಾರ್ಯದರ್ಶಿ ಶ್ರೀಕಾಂತ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಕೆ ಆರ್ .ಮಂಜುಳಾ, ಮುಳ್ಳುಸೋಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಚಲುವರಾಜ್, ಕೂಡಿಗೆ ದಂಡಿನಮ್ಮ ಮತ್ತು ಬಸವೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ.ಭೀಮಣ್ಣ, ಕಾರ್ಯದರ್ಶಿ ಕೆ ಎಸ್ ಚಂದ್ರಶೇಖರ್, ಮಹಿಳಾ ಘಟಕದ ಸದಸ್ಯೆ ಕಲ್ಪನಾ, ರೈತ ಮೋರ್ಚಾ ಕೂಡಿಗೆ ವಿಭಾಗದ ಮುಖ್ಯಸ್ಥ ಪ್ರಸನ್ನ, ತಾಲೂಕು ಸಮಿತಿಯ ಸದಸ್ಯರಾದ ಸಂತೋಷ್, ರಾಜಕುಮಾರ , ಪಳಂಗಪ್ಪ, ಶ್ರೀನಾಥ್ ಧರ್ಮಪ್ಪ, ಶ್ರೀಧರ್ ಮತ್ತಿತರರು ಭಾಗವಹಿಸಿದ್ದರು.