ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ಮಗ ಬಾಯಿಗೆ ಬಂದಂತೆ ಬೈದಿದ್ದಕ್ಕೆ ತಂದೆಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ತಂದೆ ಸಾವಿನ ಸುದ್ದಿ ಕೇಳಿ ಇತ್ತ ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.75 ವರ್ಷದ ಸುಬ್ಬಯ್ಯ ಹಾಗೂ 36 ವರ್ಷದ ಗಿರೀಶ್ ಗಣಪತಿ ಆತ್ಮಹತ್ಯೆಗೆ ಶರಣಾದ ತಂದೆ-ಮಗ.
ಕ್ಷುಲ್ಲಕ ಕಾರಣಕ್ಕೆ ಮಗ ನಿಂದಿಸಿದ ಎಂದು ಬೇಸರಗೊಂಡ ತಂದೆ ಸುಬ್ಬಯ್ಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪುತ್ರ ಗಿರೀಶ್ ನೇಣಿಗೆ ಶರಣಾಗಿದ್ದಾನೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.