ಮಡಿಕೇರಿ: ಅಣ್ಣನೊಂದಿಗೆ ತಮ್ಮನೂ ಜೊತೆಯಾಗಿ ಕೆರೆಗೆ ಸ್ನಾನಕ್ಕೆ ತೆರಳಿದ್ದು, ತಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ವೀರಾಜಪೇಟೆ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ವೀರಾಜಪೇಟೆಯ ಶಾಂತಿ ನಗರದ ನಿವಾಸಿ ಬಿ.ಎಸ್.ಎಫ್ ನಿವೃತ್ತ ಯೋಧ ದಿ. ಡಿ.ಎ.ಮಜೀದ್ ಎಂಬವರ ಪುತ್ರ ಮೊಹಮ್ಮದ್ ಜಿಯಾನ್ (19)ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಯುವಕ.
ಮಜೀದ್ ಅವರ ಪುತ್ರ ಮೊಹಮ್ಮದ್ ಜಿಷಾನ್ (20) ಮತ್ತು ದ್ವೀತಿಯ ಸಹೋದರ ಮೊಹಮ್ಮದ್ ಜಿಯಾನ್ ನಲ್ವತ್ತೊಕ್ಲು ಹೊಸಕೋಟೆ ಗ್ರಾಮದಲ್ಲಿರುವ ಕಾಫಿ ತೋಟದ ಅಂಚಿನಲ್ಲಿರುವ ಕೆರೆಯಲ್ಲಿ ಸ್ನಾನ ಮಾಡುವ ಸಂದರ್ಭ ಜಿಯಾನ್ ಆಳವಾದ ಸ್ಥಳದಲ್ಲಿ ಮುಳುಗಿ ಸಾವನ್ನಾಪ್ಪಿದ್ದಾನೆ ಎನ್ನಲಾಗಿದೆ.
ಮೃತನ ಅಣ್ಣ ಮೊಹಮ್ಮದ್ ಜಿಷಾನ್ ನೀಡಿದ ದೂರಿನ ಅನ್ವಯ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ಪ್ರಕರಣ ದಾಖಲಾಗಿದೆ. ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಶರೀರವನ್ನು ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.