ಮಡಿಕೇರಿ: ಮೇ 16ರಂದೇ ಶಾಲೆಗಳು ಆರಂಭವಾಗಲಿದ್ದು, ಮೇ 19ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದು, ಇದರೊಂದಿಗೆ ಶಾಲೆ ಆರಂಭ ಹಾಗೂ ಎಸ್.ಎಸ್.ಎಲ್.ಸಿ.ಫಲಿತಾಂಶದ ಬಗ್ಗೆ ಇದ್ದ ಅನಿಶ್ಚಿತತೆಯನ್ನು ದೂರ ಮಾಡಿದ್ದಾರೆ.
ಕೊಡಗು ಜಿಲ್ಲಾ ಪ್ರವಾಸದಲ್ಲಿರುವ ಅವರು ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇ 19ರಂದು ಬೆಳಗ್ಗೆ ಆನ್ ಲೈನ್’ಗೆ ಫಲಿತಾಂಶ ಅಪ್ಲೋಡ್ ಆಗಲಿದ್ದು, ಮಧ್ಯಾಹ್ನದ ನಂತರ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಮೇ 16ರಂದು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಮುಂದಿನ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಲಿದ್ದು, ತುಮಕೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ವಿವರಿಸಿದರು.
ಸಚಿವ ಸಂಪುಟ ಪುನರ್ ರಚನೆ ಸಂಬಂಧ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಾಗೇಶ್ ಅವರು, ವಿದೇಶ ಪ್ರವಾಸದ ಬಳಿಕ ಮುಖ್ಯಮಂತ್ರಿಯವರೇ ಈ ಬಗ್ಗೆ ತಿಳಿಸಲಿದ್ದಾರೆ ಎಂದರಲ್ಲದೆ, ಕೊಡಗಿನ ಇಬ್ಬರು ಹಿರಿಯ ಶಾಸಕರಿಗೆ ಅವಕಾಶ ದೊರೆಯಬೇಕೆಂಬುದು ತಮ್ಮ ಬಯಕೆಯೂ ಆಗಿದೆ ಎಂದು ನುಡಿದರು. ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಹಾಜರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ